ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ತಾಲೂಕಿನ ಜೋಗ ಗ್ರಾಮದಲ್ಲಿ ಯುವಕನೊಬ್ಬ ಮನೆ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಜೋಗದ ನಿವಾಸಿ ಗಂಗಾಧರ್(38) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಗಂಗಾಧರ್ ಅವರು ಭಾನುವಾರ ರಾತ್ರಿಯೇ ಮನೆಯಿಂದ ಹೊರಗೆ ಬಂದಿದ್ದು, ಸೀರೆ ಬಿಗಿದುಕೊಂಡಿದ್ದಾರೆ. ಇದುವರೆಗೆ ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಜೋಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.