ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ಕೇಂದ್ರ ಕಾರಾಗೃಹ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆ ಯರ್ನಾಡ ಗ್ರಾಮ ಮೂಲದ ಅಶ್ವಾಕ್ ವಿ.ಠಗರಿ (25) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೇಂದ್ರ ಕಾರಾಗೃಹದಲ್ಲಿ ವಾರ್ಡನ್ ಆಗಿ ಕಾರ್ಯನಿರ್ವಹಿಸುತಿದ್ದ ಇವರು ಜೈಲು ಆವರಣದಲ್ಲಿರುವ ವಸತಿ ಗೃಹದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
READ | ವಿಶ್ವದ ಬಲಿಷ್ಠ ತಂಡ ಎಡವಿದ್ದೆಲ್ಲಿ? ಇಲ್ಲಿವೆ ಟಾಪ್ 4 ಕಾರಣಗಳು
ಆರೋಗ್ಯದ ಸಮಸ್ಯೆಯಿಂದಾಗಿ ಆತ್ಮಹತ್ಯೆ
ಅಶ್ವಾಕ್ ಅವರಿಗೆ ಕಳೆದ ಎರಡು ವರ್ಷಗಳಿಂದ ಆರೋಗ್ಯದ ಸಮಸ್ಯೆ ಇದ್ದ ಕಾರಣ ಅವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಶವದ ಮರಣೋತ್ತರ ಪರೀಕ್ಷೆ ಮೆಗ್ಗಾನ್ ನಲ್ಲಿ ಮಾಡಲಾಗಿದೆ.
ಪತ್ನಿಗೆ ಕರೆ ಮಾಡಿ ಆತ್ಮಹತ್ಯೆ
ಅಶ್ವಾಕ್ ಅವರ ಪತ್ನಿ ಶಿಫಾನ ಅವರು ತವರು ಮನೆಗೆ ಹೋಗಿದ್ದಾಗ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದರ ಬಗ್ಗೆ ಸಹೋದ್ಯೋಗಿಗೆ ಮಾಹಿತಿ ನೀಡಿದ ಶಿಫಾನ ಅವರ ತಂದೆ ಆತ್ಮಹತ್ಯೆ ತಡೆಯುವಂತರ ತಿಳಿಸಿದ್ದಾರೆ. ಅಶ್ವಾಕ್ ಅವರಿದ್ದ ಮನೆಗೆ ಹೋಗುವ ಹೊತ್ತಿಗೆ ನೇಣು ಬಿಗಿದುಕೊಂಡಿದ್ದರು ಎಂದು ಜೈಲರ್ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ತುಂಗಾನಗರ ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.
https://www.suddikanaja.com/2021/01/12/video-call-facility-in-shivamogga-central-jail/