ಸುದ್ದಿ ಕಣಜ.ಕಾಂ | KARNATAKA | CRIME NEWS
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವರ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರಿನಲ್ಲಿ ಹಣ ವಸೂಲಿ ಮಾಡಿದ ಶಿವಮೊಗ್ಗ ಮೂಲದ ಭವಾನಿ ರಾವ್ ಮೋರೆ (37) ಎಂಬುವವರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭವಾನಿ ರಾವ್ ಮೋರೆ ಅವರು ಬೆಂಗಳೂರಿನ ವಿಜಯ ನಗರ ನಿವಾಸಿ ಕರ್ನಾಟಕ ಬಾರ್ ಆಂಡ್ ರೆಸ್ಟೋರೆಂಟ್ ಓನರ್ಸ್ ವಿಮೆನ್ ಎಂಪ್ಲಾಯಿಂಟ್ ಸರ್ವಿಸ್ ಅಸೋಸಿಯೇಶನ್ ಜಂಟಿ ಕಾರ್ಯದರ್ಶಿ ಸುರೇಶ್ ಎಂಬುವವರಿಂದ 25 ಲಕ್ಷ ವಂಚಿಸಿದ್ದಾನೆ. ಈ ಸಂಬಂಧ ಮೋರೆ ಅವರನ್ನು ಬಂಧಿಸಲಾಗಿದೆ.
ಬೆಂಗಳೂರಿನಲ್ಲಿರುವ ಲೇಡಿಸ್ ಸರ್ವಿಸ್ ಬಾರ್ ಗಳನ್ನು ಮುಚ್ಚುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದರು. ಇದರನ್ವಯ ಬಾರ್ ಗಳನ್ನು ಎರಡು ದಿನ ಬಂದ್ ಮಾಡಲಾಗಿತ್ತು. ಈ ವಿಚಾರ ಅರಿತ ಮೋರೆ ಸುರೇಶ್ ಅವರಿಗೆ ಭೇಟಿಯಾಗಿ ತಾನು ಶಿವಮೊಗ್ಗ ಮೂಲದವನೆಂದು ಪರಿಚಯಿಸಿಕೊಂಡಿದ್ದಾನೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಜಿಲ್ಲೆಯ ಬಿಜೆಪಿ ಮುಖಂಡರ ಪರಿಚಯವಿದೆ ಎಂದು ಅವರೊಂದಿಗೆ ತೆಗೆಸಿಕೊಂಡ ಫೋಟೊಗಳನ್ನು ತೋರಿಸಿದ್ದಾನೆ. ಆದರೆ, ಸುರೇಶ್ ಅವರು ಇನ್ನುಳಿದ ಸದಸ್ಯರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ. ಅದರಂತೆ, 64 ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ಓಕ್ ವುಡ್ ಹೋಟೆಲ್ ನಲ್ಲಿ 1.25 ಕೋಟಿ ಹಣವನ್ನು ನೀಡಲಾಗಿದೆ.
ಯಾವ ಕೆಲಸಕ್ಕಾಗಿ 1.25 ಕೋಟಿ ಪಡೆದಿದ್ದರೋ ಅದನ್ನು ಮಾಡಿಕೊಟ್ಟಿರಲಿಲ್ಲ. ಹೀಗಾಗಿ, ಸುರೇಶ್ ಅವರು ಮೋರೆಯನ್ನು ವಿಚಾರಿಸಿದಾಗ 1 ಕೋಟಿ ವಾಪಸ್ ನೀಡಿದ್ದಾರೆ. ಇನ್ನುಳಿದ 25 ಲಕ್ಷ ನೀಡಲು ಹಿಂದೇಟು ಹಾಕಿದ್ದು, ಬೆದರಿಕೆ ಒಡ್ಡಿದ್ದಾರೆ. ಹೀಗಾಗಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮೋರೆ ಅವರನ್ನು ಬಂಧಿಸಲಾಗಿದೆ.
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.
https://www.suddikanaja.com/2021/09/11/online-fraud-to-a-doctor/