ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ತಾಲೂಕಿನ ರಾಮನಗರ ಗ್ರಾಮದಲ್ಲಿ ಒಂದು ಕ್ವಿಂಟಾಲ್ ಅಡಿಕೆ ಕಳ್ಳತನವಾಗಿದ್ದು, ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಲೋಕೇಶ್ವರಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ಅಡಿಕೆ ಕಳ್ಳತನ ನಡೆದಿದೆ.
ನಿತ್ಯ ಅಡಿಕೆ ಕಳ್ಳತನ ಮಾಡುತ್ತಿರುವ ಬಗ್ಗೆ ಅನುಮಾನಗೊಂಡು ತೋಟದ ಮಾಲೀಕ ಪರಿಶೀಲಿಸುವುದಕ್ಕೆಂದು ರಾತ್ರಿ ತೋಟಕ್ಕೆ ಬಂದಿದ್ದಾರೆ. ಆಗ ಕಳ್ಳರು ಅಡಿಕೆ ಗೊನೆಯನ್ನು ಕಳ್ಳತನ ಮಾಡುತ್ತಿದ್ದರು. ಆದರೆ, ಲೋಕೇಶ್ವರಪ್ಪ ಅವರು ಬಂದಿದ್ದನ್ನು ಕಂಡು ಕಳ್ಳರು ಪರಾರಿಯಾಗಿದ್ದಾರೆ.
ನಂತರ, ಪರಿಶೀಲನೆ ಮಾಡಿದಾಗ 10 ಮರಗಳಲ್ಲಿ 20ಕ್ಕೂ ಅಧಿಕ ಗೊನೆಗಳನ್ನು ಕೊಯ್ದು ಇಡಲಾಗಿತ್ತು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.
https://www.suddikanaja.com/2021/10/31/arecanut-theft-increase-after-price-hike-in-karnataka/