ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ನಗರದ ನ್ಯಾಷನಲ್ ಕಾಲೇಜಿನಲ್ಲಿ ನವೆಂಬರ್ 18ರಂದು ಮಧ್ಯಾಹ್ನ 3.30ಕ್ಕೆ `ಜನಸ್ವರಾಜ್ ಸಮಾವೇಶ’ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು .
ದಾವಣಗೆರೆ ಮೂರು ವಿಧಾನ ಸಭಾ ಕ್ಷೇತ್ರ ಸೇರಿ ಶಿ ಮೊಗ್ಗ ಕ್ಷೇತ್ರದಲ್ಲಿ ಒಟ್ಟು 4,172 ಮತದಾರರಿದ್ದಾರೆ. 1,800 ಗ್ರಾಪಂ ಸದಸ್ಯರು ಬಿಜೆಪಿ ಕಾರ್ಯಕರ್ತರಿದ್ದಾರೆ. ಎಲ್ಲರನ್ನೂ ಸಂಘಟಿಸಲಾಗುತ್ತಿದೆ. ಗೆಲವು ನಿಶ್ಚಿತ.
– ಟಿ.ಡಿ.ಮೇಘರಾಜ್, ಜಿಲ್ಲಾ ಬಿಜೆಪಿ ಅಧ್ಯಕ್ಷ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಾವೇಶ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜನಸ್ವರಾಜ್ ಸಮಾವೇಶ ನಡೆಯಲಿದ್ದು, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್, ಬಿಜೆಪಿ ಪ್ರಮುಖ ಶಂಕರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಹಿಸುವರು ಎಂದರು.
ಬಿಜೆಪಿ ಪ್ರಮುಖರಾದ ಧರ್ಮಪ್ರಸಾದ್, ಶಿವರಾಜ್, ಬಿ.ಕೆ.ಶ್ರೀನಾಥ್, ಕೆವಿ.ಅಣ್ಣಪ್ಪ, ಸುಧೀಂದ್ರ ಕಟ್ಟೆ ಉಪಸ್ಥಿತರಿದ್ದರು.
ಹೊಂಬಾಳೆ ಪ್ರೊಡಕ್ಷನ್ ಹೌಸ್ ನಿಂದ ಶಿವಮೊಗ್ಗದಲ್ಲಿ ಆಡಿಷನ್, ಯಾರ್ಯಾರು ಭಾಗವಹಿಸಬಹುದು, ಇಲ್ಲಿದೆ ಸುವರ್ಣ ಅವಕಾಶ