ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ಬೈಪಾಸ್ ಬಳಿ ಶನಿವಾರ ಬೈಕ್ ವೊಂದು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿವಮೊಗ್ಗದ ಮಿಳಘಟ್ಟ ನಿವಾಸಿ ಈರಾನಾಜ್ (7) ಬಾಲಕಿ ಮೃತಪಟ್ಟಿದ್ದು, ಸಲ್ಮಾ ಹಾಗೂ ಇಲಿಯಾಸ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.
ಚಿಕ್ಕಮಗಳೂರಿನಲ್ಲಿ ಸಂಬಂಧಿಕರೊಬ್ಬರು ಅಂತ್ಯಸಂಸ್ಕಾರ ಮುಗಿಸಿ ಬೈಕಿನಲ್ಲಿ ವಾಪಸ್ ಮನೆಗೆ ಬರುವಾಗ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದು, ವೇಗವಾಗಿ ಬಂದಿದ್ದ ಬೈಕ್ ಹಿಂಬದಿ ಡಿಕ್ಕಿ ಹೊಡೆದಿದೆ. ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.