ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಎರಡು ವರ್ಷಗಳ ನಂತರ ಅಂಗನವಾಡಿಗಳು ಆರಂಭಗೊಂಡಿದ್ದು, ಮಕ್ಕಳನ್ನು ಅತ್ಯಂತ ಪ್ರೀತಿಯಿಂದ ಸ್ವಾಗತಿಸಲಾಯಿತು.
ಕೋವಿಡ್ ಹಿನ್ನೆಲೆ ಸ್ಥಗಿತಗೊಂಡಿದ್ದ ಅಂಗನವಾಡಿಗಳ ಕಾರ್ಯ ಚಟುವಟಿಕೆ ಸೋಮವಾರದಿಂದ ಪುನರಾರಂಭಗೊಂಡಿದ್ದು, ಹಬ್ಬದ ವಾತಾವರಣವಿತ್ತು.
ಪ್ರಸ್ತುತ ಕೆಲವು ಅಂಗನವಾಡಿಗಳಲ್ಲಿ ಶೇ.70ಕ್ಕೂ ಅಧಿಕ ಮಕ್ಕಳು ಆಗಮಿಸುತಿದ್ದು, ಅಂತಹ ಕಡೆಗಳಲ್ಲಿ ಪಾಳಿ ಮಾಡುವ ಯೋಚನೆಯೂ ನಡೆಯುತ್ತಿದೆ. ಪ್ರಸ್ತುತ ಅಂಗನವಾಡಿಯ ಅವಧಿ ಬೆಳಗ್ಗೆ 10ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಇದೆ.
ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ಮಕ್ಕಳಿಗೆ ಸಿಹಿ ಹಂಚಿ ಸ್ವಾಗತಿಸಲಾಯಿತು. ಮಕ್ಕಳನ್ನು ಯಾವುದೇ ಭಯವಿಲ್ಲದೇ ಕಳುಹಿಸಬೇಕು ಎಂದು ಮನವಿ ಮಾಡಿದರು.
ಆದರೆ, ಪೋಷಕರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಬೇಕು. ಭಯ ಬೇಡ ಎಂದು ಸಲಹೆ ನೀಡಿದದರು.
ಯುವ ಮುಖಂಡ ಕೆ. ರಂಗನಾಥ್, ವಜ್ರೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಸೋಮೇಶ್, ಅಂಗನವಾಡಿಯ ಕೇಂದ್ರದ ಶಾಂತಾ, ಗೌರಮ್ಮ ಉಪಸ್ಥಿತರಿದ್ದರು.
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.
https://www.suddikanaja.com/2021/07/16/lion-safari/