ಸುದ್ದಿ ಕಣಜ.ಕಾಂ | SHIVAMOGGA CITY | PROTEST
ಶಿವಮೊಗ್ಗ: ನಗರದ ಕುವೆಂಪು ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಸೋಮವಾರ ಪ್ರತಿಭಟನೆ ಮಾಡಲಾಯಿತು. ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು.
ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಕುವೆಂಪು ರಸ್ತೆಯಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸ್ಮಾರ್ಟ್ ಸಿಟಿ ಕಾಮಗಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.
ರಸ್ತೆ ಅಗಲೀಕರಣಕ್ಕೆ ಬೇಡಿಕೆ
ಸದಾ ವಾಹನ ಸಂಚಾರದಿಂದ ಕೂಡಿರುವ ಕುವೆಂಪು ರಸ್ತೆ ಅಗಲೀಕರಣ ಮಾಡದೇ ಸ್ಮಾರ್ಟ್ ಸಿಟಿ ಕಾಮಗಾರಿ ಮಾಡಲಾಗುತ್ತಿದೆ. ಇದು ಅವೈಜ್ಞಾನಿಕ ಎಂದು ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ.
READ | ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಪಡಿತರ ಅಕ್ಕಿ ಸೀಜ್
ಕುವೆಂಪು ರಸ್ತೆಯಲ್ಲಿರುವ ಒತ್ತುವರಿಯನ್ನು ತೆರವುಗೊಳಿಸಬೇಕು. ಖಾತೆದಾರರಿಗೆ ಪರಿಹಾರ ನೀಡಿ ರಸ್ತೆ ಅಗಲೀಕರಣ ಮಾಡಬೇಕು ಎಂದು ಈ ಹಿಂದಿನ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಹಣವೂ ಮಂಜೂರು ಆಗಿದೆ. ಕೆಲ ತಾಂತ್ರಿಕ ಕಾರಣಗಳಿಂದಾಗಿ ಅಗಲೀಕರಣ ಪ್ರಕ್ರಿಯೆಗೆ ಗ್ರಹಣ ಹಿಡಿದಿದೆ. ಈ ಸಮಸ್ಯೆ ಇತ್ಯರ್ಥವಾಗದೇ ಸ್ಮಾರ್ಟ್ ಸಿಟಿ ಯೋಜನೆ ಅಡಿ ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳಲಾಗಿದೆ. ಬಾಕ್ಸ್ ಚರಂಡಿಯನ್ನು ನಕ್ಷೆ ಪ್ರಕಾರ ನೇರವಾಗಿ ಮಾಡದೇ ಝಡ್ ಆಕಾರದಲ್ಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಆಯುಕ್ತರು ಬರುವವರೆಗೆ ಪ್ರತಿಭಟನೆಯ ಪಟ್ಟು
ಪ್ರಭವಾಕ್ಕೆ ಒಳಗಾಗಿ ಒತ್ತುವರಿ ತೆರವುಗೊಳಿಸದೇ ಕಾಮಗಾರಿ ಮಾಡಲಾಗುತ್ತಿದೆ. ಹೀಗಾಗಿ, ಆಯುಕ್ತರು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಅಧಿಕಾರಿಗಳು ಬಂದು ಮಾಹಿತಿ ಒಡೆದ ನಂತರ ಪ್ರತಿಭಟನೆ ಕೈಬಿಡಲಾಯಿತು.
ದೀಪಕ್ ಸಿಂಗ್, ರಘು, ಲಕ್ಷ್ಮಣ್, ಆರೀಫ್, ಶಾಮಸುಂದರ್, ಮುಜೀಬ್ ರಸ್ತೆ ತಡೆ ವೇಳೆಯಲ್ಲಿ ಭಾಗವಹಿಸಿದ್ದರು.
https://www.suddikanaja.com/2021/05/17/ambulance-asking-heavy-amount-to-transport-dead-body/