ಸುದ್ದಿ ಕಣಜ.ಕಾಂ | DISTRICT | SHIVAMOGGA AIRPORT
ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣದ ನಾಮಕರಣದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಮಂಗಳವಾರ ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ರಾಷ್ಟ್ರೀಯ ಬಸವ ದಳ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ರಾಷ್ಟ್ರೀಯ ಬಸವದಳದ ಬೇಡಿಕೆ ಏನು?
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅಲ್ಲಮಪ್ರಭು ದೇವರು ಅಥವಾ ಶರಣೆ ಅಕ್ಕಮಹಾದೇವಿ ಅವರ ಹೆಸರು ಇಡಬೇಕು ಎಂದು ದಳದಿಂದ ಒತ್ತಾಯಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪ್ರಯತ್ನದ ಫಲವಾಗಿ ವಿಮಾನ ನಿಲ್ದಾಣ ಕಾಮಗಾರಿ ಪುನರಾರಂಭವಾಗಿದೆ. ಅದಕ್ಕೆ ಶರಣರ ಹೆಸರು ನಾಮಕರಣ ಮಾಡಬೇಕು. ಶಿವಮೊಗ್ಗ ಜಿಲ್ಲೆಯು ಬಸವಾದಿ ಶರಣರ ಪರಂಪರೆಯ ತವರಾಗಿದೆ ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.
ಬಸವ ಧರ್ಮ ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಡಾ.ಮಾತೆ ಗಂಗಾದೇವಿ ಮತ್ತಿತರರು ಉಪಸ್ಥಿತರಿದ್ದರು.
https://www.suddikanaja.com/2021/09/12/shivamogga-airoplane-five-routs-final-to-fly/