ಸುದ್ದಿ ಕಣಜ.ಕಾಂ | KARNATAKA | EDUCATION CORNER
ಶಿವಮೊಗ್ಗ: ನವುಲೆಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (University of Agricultural and Horticultural Sciences) ಆವರಣದಲ್ಲಿ ನವೆಂಬರ್ 25ರಂದು ಬೆಳಗ್ಗೆ 11 ಗಂಟೆಗೆ ಆರನೇ ಘಟಿಕೋತ್ಸವ (convocation ) ಆಯೋಜಿಸಲಾಗಿದೆ.
ಮಂಗಳವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿಶ್ವವಿದ್ಯಾಲಯ ಕುಲಪತಿ ಡಾ.ಎಂ.ಕೆ.ನಾಯ್ಕ, ಘಟಿಕೋತ್ಸವದಲ್ಲಿ ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thaawar Chand Gehlot) ಅವರು ಘಟಿಕೋತ್ಸವ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಆರನೇ ಘಟಿಕೋತ್ಸವ ಆಯೋಜಿಸಿದ್ದು, ಇದುವರೆಗೆ ವಿಶ್ವವಿದ್ಯಾಲಯದಿಂದ ಯಾರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಿರಲಿಲ್ಲ. ಇದೇ ಮೊದಲು ನೀಡುತ್ತಿದ್ದು, ಇದಕ್ಕಾಗಿ ಹೈದರಾಬಾದಿನ್ ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ.ಕೃಷ್ಣಮೂರ್ತಿ (dr krishnamurthy ) ಅವರನ್ನು ಆಯ್ಕೆ ಮಾಡಲಾಗಿದೆ.
ಕೃಷ್ಣಮೂರ್ತಿ ಅವರು ತಮ್ಮ ಸಂಸ್ಥೆ ಮೂಲಕ ರೋಟಾ ವೈರಸ್, ಟೈಫಾಯಿಡ್ ಕಾಂಜುಗೇಟ್, ಚಿಕೂನ್ ಗುನ್ಯಾ ಮತ್ತು ಜಿಕಾ ಸೇರಿದಂತೆ ಹಲವು ಮಾರಣಾಂತಿಕ ಕಾಯಿಲೆಗಳಿಗೆ ಕೈಗೆಟುಕುವ ದರದಲ್ಲಿ ಲಸಿಕೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ‘ಕೊವ್ಯಾಕ್ಸಿನ್ (covaccine)’ ಲಸಿಕೆ ಅಭಿವೃದ್ಧಿಪಡಿಸಿದ್ದಾರೆ. ಇವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡುತ್ತಿರುವುದು ವಿವಿ ಪಾಲಿಗೆ ಹೆಮ್ಮೆಯ ವಿಚಾರ ಎಂದು ಹೇಳಿದರು.
READ | ಶಿವಮೊಗ್ಗಕ್ಕೆ ಬರಲಿದ್ದಾರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಎಲ್ಲೆಲ್ಲಿ ಭೇಟಿ
238 ವಿದ್ಯಾರ್ಥಿಗಳಿಗೆ ಡಿಗ್ರಿ ಪ್ರದಾನ
ಬಿ.ಎಸ್ಸಿ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಭಾಗದ ಸ್ನಾತಕ ಪದವಿಯಲ್ಲಿನ 238 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುವುದು. ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ 105 ಎಂ.ಎಸ್ಸಿ. ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್.ಡಿ ನೀಡಲಾಗುವುದು. 9 ಬಿ.ಎಸ್ಸಿ ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕ, 14 ಎಂ.ಎಸ್ಸಿ. ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕ, 5 ಪಿಎಚ್.ಡಿ. ವಿದ್ಯಾರ್ಥಿ 5 ಚಿನ್ನದ ಪದಕ ಸೇರಿ ಒಟ್ಟು 35 ಚಿನ್ನದ ಪದಕಗಳನ್ನು 28 ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.
2020-21ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಐ.ಸಿ.ಎ.ಆರ್. ಜೆ.ಆರ್.ಎಫ್. ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯದ ಒಟ್ಟು 14 ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದಾರೆ. ಅಖಿಲ ಭಾರತ ಐ.ಸಿ.ಎ.ಆರ್. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 2 ವಿದ್ಯಾರ್ಥಿಗಳು ಎಸ್.ಆರ್.ಎಫ್. ಗಳಾಗಿ ಆಯ್ಕೆಯಾಗಿರುತ್ತಾರೆ. 15 ವಿದ್ಯಾರ್ಥಿಗಳು ಎನ್.ಟಿ.ಎಸ್. (ಸ್ನಾತಕೋತ್ತರ) ಪ್ರವೇಶ ಪಡೆದುಕೊಂಡಿದ್ದಾರೆ.
ಘಟಿಕೋತ್ಸವದಲ್ಲಿ ಭಾಗವಹಿಸಲಿರುವ ಗಣ್ಯರು
ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್, ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ ಉಪ ಮಹಾನಿರ್ದೇಶಕ (ಕೃಷಿ ಶಿಕ್ಷಣ) ಡಾ. ಆರ್.ಸಿ. ಅಗರ್ ವಾಲ್ ಭಾಗವಹಿಸಲಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಡಾ. ಹನುಮಂತಪ್ಪ, ಡಾ. ಆರ್.ಲೋಕೇಶ್, ಡಾ. ಮೃತ್ಯುಂಜಯ ವಾಲಿ, ಡಾ. ದಿನೇಶ್ ಉಪಸ್ಥಿತರಿದ್ದರು.
https://www.suddikanaja.com/2021/09/26/b-s-yediyurappa-bags-first-ever-best-mla-award/