ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ತಾಲೂಕಿನ ಆಯನೂರಿನಲ್ಲಿ ಅನುಮಾನಾಸ್ಪದವಾಗಿ ವರ್ತಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಆಯನೂರಿನ ರುದ್ರೇಶ್ ನಾಯ್ಕ್ ಎಂಬುವವರನ್ನು ಬಂಧಿಸಲಾಗಿದೆ. ಆಯನೂರು ಬಸ್ ನಿಲ್ದಾಣ ಸಮೀಪ ಈತ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಪೊಲೀಸರು ಹಿಡಿದು ವಿಚಾರಣೆ ನಡೆಸಿದ್ದಾರೆ. ಗಾಂಜಾ ಸೇವಿಸಿರಬಹುದು ಎಂಬ ಅನುಮಾನದ ಮೇಲೆ ಈತನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.