ಸುದ್ದಿ ಕಣಜ.ಕಾಂ | DISTRICT | DEEPAWALI
ಶಿವಮೊಗ್ಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(KSPCB)ಯು ಈ ಬಾರಿಯ ದೀಪಾವಳಿಯನ್ನು ಹಸಿರು ಪಟಾಕಿಗಳನ್ನು ಸುಡುವುದರ ಮೂಲಕ ಆಚರಿಸುವಂತೆ ಪರಿಸರ ಅಧಿಕಾರಿ ಹರಿಶಂಕರ್ ಮನವಿ ಮಾಡಿದ್ದಾರೆ.
READ | ಶಿವಮೊಗ್ಗದಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ, ದೀಪಾವಳಿಗೆ ಇಂಧನ ಶಾಕ್
ಯಾವ ರೀತಿಯ ಪಟಾಕಿ ಬಳಸಬಹುದು?
ಪಟಾಕಿಗಳು ಶಬ್ಧ ಮಾಲಿನ್ಯ ಹಾಗೂ ವಾಯುಮಾಲಿನ್ಯ ಉಂಟು ಮಾಡಿ ಪರಿಸರವನ್ನು ಹಾಳು ಮಾಡುತ್ತವೆ. ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಆದ್ದರಿಂದ, ದೀಪಾವಳಿ ಹಬ್ಬದ ಸಂದರ್ಭದಲ್ಲಿ 125 dB ಕ್ಕಿಂತ ಹೆಚ್ಚಿನ ಶಬ್ದ ಉಂಟು ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ.
ಅದಕ್ಕಾಗಿ ಅಂಗಡಿಗಳಲ್ಲಿ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ಹಚ್ಚುವಂತಿಲ್ಲ ಎಂದು ಆದೇಶಿಸಿದ್ದಾರೆ.
READ | ಪದ ಕಣಜ 2- ‘ಅಕಾಡೆಮಿ’ ಶಬ್ದ ಈಗ ಸಂಸ್ಥೆ, ಆಗ ವ್ಯಕ್ತಿಯ ಹೆಸರು!
ಪರಿಸರ, ಪ್ರಾಣಿ, ಪಕ್ಷಿ ಹಾಗೂ ಜನತೆಯ ಹಿತದೃಷ್ಟಿಯಿಂದ ಮತ್ತು ಕೋವಿಡ್-19ರ ಸೋಂಕು ಪ್ರಸರಣೆಯನ್ನು ತಡೆಗಟ್ಟು ನಿಟ್ಟಿನಲ್ಲಿ ದೀಪಾವಳಿ ಹಬ್ಬವನ್ನು ಸರಳ, ಭಕ್ತಿ ಹಾಗೂ ಕೋವಿಡ್ ಮಾರ್ಗಸೂಚಿ ಅನ್ವಯ ಆಚರಿಸಬೇಕು. ಪರಿಸರ ಸ್ನೇಹಿ ದೀಪಾವಳಿಗೆ ಅಧಿಕ ಒತ್ತು ನೀಡಬೇಕು ಎಂದು ಮಂಡಳಿಯ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
https://www.suddikanaja.com/2020/11/13/karnataka-govt-order-to-use-green-crackers/