ಸುದ್ದಿ ಕಣಜ.ಕಾಂ | KARNATAKA | EDUCATION CORNER
ಶಿವಮೊಗ್ಗ: ನವುಲೆಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆರನೇ ಘಟಿಕೋತ್ಸವ ಎಲ್ಲರನ್ನೂ ಸ್ತಂಭೀಭೂತರನ್ನಾಗಿ ಮಾಡಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
READ | ಜೋಗ ಜಲಪಾತದ ಬಗ್ಗೆ ಮಾಹಿತಿ ಪಡೆದ ರಾಜ್ಯಪಾಲ ಗೆಲ್ಹೋಟ್, ಶಿವಮೊಗ್ಗ ಬಗ್ಗೆ ಹೇಳಿದ್ದೇನು?
- ವಿದ್ಯಾರ್ಥಿಗಳಿಂದ ಚಿನ್ನದ ಕೋಯ್ಲು
ಬಿ.ಎಸ್ಸಿ.ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಭಾಗದ ಸ್ನಾತಕ ಪದವಿಯಲ್ಲಿನ 235 ವಿದ್ಯಾರ್ಥಿಗಳಿಗೆ ಪದವಿ ಹಾಗೂ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ 105 ಎಂ.ಎಸ್ಸಿ. ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್.ಡಿ.ಪದವಿಯನ್ನು ಗೆಹ್ಲೋಟ್ ಪ್ರದಾನ ಮಾಡಿದರು. ಇದರಲ್ಲಿ 9 ಬಿಎಸ್ಸಿ ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕ, 14 ಎಂ.ಎಸ್ಸಿ. ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕ ಮತ್ತು 5 ಪಿಎಚ್.ಡಿ. ವಿದ್ಯಾರ್ಥಿಗಳಿಗೆ 5 ಚಿನ್ನದ ಪದಕ ಸೇರಿ ಒಟ್ಟು 35 ಚಿನ್ನದ ಪದಕಗಳನ್ನು 28 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿತು. - ಕೋವ್ಯಾಕ್ಸಿನ್ ಜನಕನಿಗೆ ‘ಗೌಡಾ’ ಪಟ್ಟ
ಭಾರತ ಸಂಜಾತ ಡಾ.ಕೃಷ್ಣಮೂರ್ತಿಗೆ ಗೌರವ ಡಾಕ್ಟರೇಟ್ (ಗೌಡಾ)ಪ್ರದಾನ ಮಾಡಲಾಯಿತು.
ಈ ಮೂಲಕ ‘ಗೌಡಾ’ಗೆ ಗೌರವ ದಕ್ಕಿದಂತಾಗಿದ್ದು, ಹೊಸದೊಂದು ಮೈಲಿಗಲ್ಲನ್ನು ವಿಶ್ವವಿದ್ಯಾಲಯ ಹಾಕಿಕೊಟ್ಟಂತಾಗಿದೆ. ವಿವಿ ಆರಂಭಗೊಂಡ ಬಳಿಕ ಇದೇ ಮೊದಲ ಸಲ ಗೌಡಾ ನೀಡಲಾಗಿದೆ. ಇವರು ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿಯಾಗಿದ್ದು, ಇವರು ಹೈದರಾಬಾದಿನ ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದಾರೆ. ತಮ್ಮ ಸಂಸ್ಥೆಯ ಮೂಲಕ ರೋಟವೈರಸ್, ಟೈಫಾಯಿಡ್ ಕಾಂಜುಗೇಟ್, ಚಿಕೂನ್ ಗುನ್ಯಾ ಮತ್ತು ಜಿಕಾ ಮುಂತಾದ ಅನೇಕ ಮಾರಣಾಂತಿಕ ಕಾಯಿಲೆಗಳಿಗೆ ಕೈಗೆಟುಕುವ ದರದಲ್ಲಿ ಲಸಿಕೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. - ಆಗ ಕ್ವಾಂಟಿಟಿ ಈಗ ಕ್ವಾಲಿಟಿ ಬಗ್ಗೆ ಚಿಂತನೆ
ಘಟಿಕೋತ್ಸವ ದಿಕ್ಸೂಚಿ ಭಾಷಣ ಮಾಡಿದ ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ಉಪ ಮಹಾ ನಿರ್ದೇಶಕ ಡಾ.ಸಿ.ಆರ್. ಅಗರ್ ವಾಲ್, ಪೋಷಕಾಂಶಯುಕ್ತ ಆಹಾರ ಉತ್ಪಾದನೆಗೆ ಒತ್ತು ನೀಡಬೇಕು. ಇದರಿಂದ, ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಪೋಷಕಾಂಶಯುಕ್ತ ಆಹಾರ ಉತ್ಪಾದನೆ ಇಂದಿನ ಅಗತ್ಯತೆ ಆಗಿದೆ. ಇದನ್ನು ಕೃಷಿ ಪದವೀಧರರು ಸವಾಲಾಗಿ ಸ್ವೀಕರಿಸಬೇಕು. ಇಂದು ಶೇ.25ರಷ್ಟು ಜೀವ ವೈವಿಧ್ಯತೆಗೆ ಧಕ್ಕೆಯಾಗುತ್ತಿದ್ದು, ಇದನ್ನು ಸರಿಪಡಿಸಕೊಂಡು ಹೋಗುವಂತಹ ಕೃಷಿ ಪದ್ಧತಿಗೆ ಒತ್ತು ನೀಡಬೇಕಿದೆ ಎಂದು ಹೇಳಿದರು. - NEP ರಾಷ್ಟ್ರದ ಭವಿಷ್ಯಕ್ಕೆ ದಿಕ್ಸೂಚಿ
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ರಾಷ್ಟ್ರದ ಭವಿಷ್ಯಕ್ಕೆ ಹೊಸ ದಿಕ್ಸೂಚಿ ನೀಡುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳ ಓದಿನ ಕ್ರಮವೇ ಬದಲಾಗುತ್ತಿದೆ. ಕೌಶಲ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಪದವೀಧರರಿಂದ ನಾವಿನ್ಯತೆಯ ಶೋಧ ಹಾಗೂ ಉದ್ಯಮಗಳ ಸ್ಥಾಪನೆ ನಿರೀಕ್ಷಿಸಲಾಗುತ್ತಿದೆ ಎಂದು ಡಾ.ಸಿ.ಆರ್. ಅಗರ್ ವಾಲ್ ಅಭಿಪ್ರಾಯ ಪಟ್ಟರು
ವಿವಿ ಕುಲಪತಿ ಡಾ. ಎಂ.ಕೆ. ನಾಯ್ಕ ಸ್ವಾಗತಿಸಿದರು. ಕುಲಸಚಿವ ಡಾ. ಆರ್. ಲೋಕೇಶ್ ಉಪಸ್ಥಿತರಿದ್ದರು.
https://www.suddikanaja.com/2021/01/26/koo-application-developed-by-indian-got-good-response-from-users/