ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಒಂದು ಸ್ಥಾನಕ್ಕೆ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸೇರಿ ಒಟ್ಟು ನಾಲ್ವರು ಕಣದಲ್ಲಿದ್ದಾರೆ. ಆದರೆ, ಇದರಲ್ಲಿ ಮತದಾನದ ಹಕ್ಕು ಹೊಂದಿರುವುದು ಒಬ್ಬರು ಮಾತ್ರ!
ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನಕುಮಾರ್ ಅವರು ಈಗಾಗಲೇ ವಿಧಾನ ಪರಿಷತ್ ಸದಸ್ಯರಾಗಿರುವುದರಿಂದ ಅವರು ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ, ಇನ್ನುಳಿದ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್, ಜೆಡಿಯು ಅಭ್ಯರ್ಥೀ ಶಶಿಕುಮಾರ್ ಗೌಡ, ಪಕ್ಷೇತರ ಅಭ್ಯರ್ಥಿ ರವಿ ಅವರುಗಳು ಯಾವುದೇ ಸ್ಥಳೀಯ ಸಂಸ್ಥೆಯ ಸದಸ್ಯರಾಗಿರದ ಕಾರಣದಿಂದಾಗಿ ಮತದಾನದ ಹಕ್ಕು ಇವರಿಗಿಲ್ಲ.