ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿಕೆಗೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಶನಿವಾರ ಪ್ರತಿಭಟನೆ ಮಾಡಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಮೋರ್ಚಾದ ಪದಾಧಿಕಾರಿಗಳು, ಅತ್ಯಾಚಾರದ ಬಗ್ಗೆ ಹೇಳಿಕೆ ನೀಡಿರುವ ರಮೇಶ್ ಕುಮಾರ್ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
READ | ತ್ಯಾವರೆಕೊಪ್ಪ ಹುಲಿ, ಸಿಂಹ ಧಾಮಕ್ಕೆ ಮತ್ತೊಂದು ಅತಿಥಿ ಆಗಮನ, ಇದು ರಾಜ್ಯದ ಮೂರನೇ ಮೃಗಾಲಯ
ಕೀಳು ಅಭಿರುಚಿಯ ಹೇಳಿಕೆಯನ್ನು ನೀಡಿರುವ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಅವರ ಈ ರೀತಿಯ ಹೇಳಿಕೆಯಿಂದ ಸ್ತ್ರೀಯರಿಗೆ ಅವಮಾನ ಮಾಡಿದಂತಾಗಿದೆ ಎಂದು ಟೀಕಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವಿದ್ಯಾಲಕ್ಷ್ಮಿಪತಿ, ನಗರಾಧ್ಯಕ್ಷೆ ಸುರೇಖಾ ಮುರಳೀಧರ್, ಪ್ರಮುಖರಾದ ಆರತಿ ಪ್ರಕಾಶ್, ರಶ್ಮಿ ಶ್ರೀನಿವಾಸ್, ಗೀತಾ, ವನಜಾಕ್ಷಿ, ಸುಮಾ, ಯಶೋಧಾ, ಸುನಿತಾ, ಮಂಜುಳಾ, ಮಾಲಾ ಸೇರಿದಂತೆ ಇತರರು ಭಾಗವಹಿಸಿದ್ದರು.