ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತಹಸೀಲ್ದಾರ್ ನೇತೃತ್ವದ ತಂಡವು ವರದಾ ರಸ್ತೆಯ ದಿನಸಿ ಅಂಗಡಿಯೊಂದರಲ್ಲಿ ಶೇಖರಿಸಿದ್ದ 15 ಕ್ವಿಂಟಾಲ್ ಅನ್ನ ಭಾಗ್ಯದ ಅಕ್ಕಿಯನ್ನು ಶನಿವಾರ ವಶಕ್ಕೆ ಪಡೆಯಲಾಗಿದೆ.
ಅನಾಮಧೇಯ ಕರೆಯ ಮೂಲಕ ಅಕ್ರಮವಾಗಿ ಅನ್ನ ಭಾಗ್ಯದ ಅಕ್ಕಿಯನ್ನು ಶೇಖರಣೆ ಮಾಡಿರುವ ಬಗ್ಗೆ ದೂರು ಬಂದಿದ್ದು, ಮೇಲಾಧಿಕಾರಿಗಳ ಸೂಚನೆಯ ಮೇರೆಗೆ ತಹಸೀಲ್ದಾರ್ ಚಂದ್ರಶೇಖರ್ ನೇತೃತ್ವದಲ್ಲಿ ದಿನಸಿ ಅಂಗಡಿಯ ಮೇಲೆ ದಾಳಿ ಮಾಡಲಾಗಿದೆ. ಈ ಸಂಬಂಧ ಟ್ರೇಡರ್ಸ್ ವೊಂದರ ಮಾಲೀಕರ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ.