ಸುದ್ದಿ ಕಣಜ.ಕಾಂ | CITY | LAW UNIVERSITY
ಶಿವಮೊಗ್ಗ: ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿಗಳು ಹಾಲ್ ಟಿಕೆಟ್ ಹರಿದು ಗುರುವಾರ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು
ಸಿ.ಆರ್.ಸಿ. ನ್ಯಾಷನಲ್ ಕಾಲೇಜ್ ಆಫ್ ಲಾನ ಐದನೇ ವರ್ಷದ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ಮಾಡಲಾಯಿತು.
VIDEO REPORT | ಕಾನೂನು ವಿವಿ ಕುಲಪತಿಗೆ ಏಕವಚನದಲ್ಲೇ ಬೈದ ವಿದ್ಯಾರ್ಥಿಗಳು
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ನಡುವೆ ಮಲತಾಯಿ ಧೋರಣೆಯನ್ನು ಮಾಡುತ್ತಿದೆ. ವಿಶ್ವವಿದ್ಯಾಲಯವು ಬಾರ್ ಕೌನ್ಸಿಲ್ ಆಫ್ ಇಂಡಿಯಾ, ಯುಸಿಜಿ ಆದೇಶವನ್ನು ಮೀರಿ ಪರೀಕ್ಷೆ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯ ತೀರ್ಪನ್ನೂ ಲೆಕ್ಕಿಸದೆ ಪರೀಕ್ಷೆ ನಡೆಸುತ್ತಿರುವುದನ್ನು ವಿದ್ಯಾರ್ಥಿಗಳು ಖಂಡಿಸಿ ಪ್ರವೇಶ ಪತ್ರವನ್ನು ಹರಿಯುವ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಸಿ.ಎಂ. ಚಿನ್ಮಯ್, ನಂದೀಶ್, ದುಷ್ಯಂತ, ರಶ್ಮಿ, ಯಶಸ್ವಿನಿ, ಮಾನಸ, ಗೌತಮ್ ಸೇರಿ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.