ಸುದ್ದಿ ಕಣಜ.ಕಾಂ | DISTRICT | POWER MINISTER TP
ಶಿವಮೊಗ್ಗ: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಅವರು ಜನವರಿ 1ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಬೆಳಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು ನೆಲಮಂಗಲ, ಕುಣಿಗಲ್, ಚನ್ನರಾಯಪಟ್ಟಣ, ಅರಸೀಕೆರೆ, ಕಡೂರು, ಬೀರೂರು, ಭದ್ರಾವತಿ ಮಾರ್ಗದ ಮೂಲಕ ಶಿವಮೊಗ್ಗಕ್ಕೆ ಬೆಳಗ್ಗೆ 10.30ಕ್ಕೆ ತಲುಪಲಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಶಿವಮೊಗ್ಗ ವಲಯದಲ್ಲಿ ಕಾರ್ಯಗತಗೊಳಿಸಿರುವ / ಕಾರ್ಯಗತಗೊಳಿಸಲಾಗುತ್ತಿರುವ ನಿರಂತರ ಜ್ಯೋತಿ ವಿದ್ಯುತ್ ಕಾರ್ಯಕ್ರಮ ಕುರಿತು ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗ ರಂಗಾಯಣಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4.30ಕ್ಕೆ ತೀರ್ಥಹಳ್ಳಿ-ಆಗುಂಬೆ ರಸ್ತೆ ಮಾರ್ಗದ ಮೂಲಕ ಸಂಜೆ 7.30ಕ್ಕೆ ಕಾರ್ಕಳಕ್ಕೆ ತಲುಪುವರು.