ಸುದ್ದಿ ಕಣಜ.ಕಾಂ | CITY | ABVP PROTEST
ಶಿವಮೊಗ್ಗ: ಶಾಲೆ, ಕಾಲೇಜುಗಳು ಆರಂಭಗೊಂಡು ಮೂರು ತಿಂಗಳಿಗಿಂತ ಅಧಿಕವಾಗಿದೆ. ಆದರೆ, ಇದುವರೆಗೆ ಹಲವೆಡೆ ಬಸ್ ಸೌಲಭ್ಯವೇ ಇಲ್ಲ. ಜೊತೆಗೆ, ಸ್ಕಾಲರ್ ಶಿಪ್ ಕೂಡ ಲಭಿಸಿಲ್ಲ ಎಂದು ಎಬಿವಿಪಿ ಆರೋಪಿಸಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಸೋಮವಾರ ಪ್ರತಿಭಟನೆ ಮಾಡಿದ ಎಬಿವಿಪಿ ಕಾರ್ಯಕರ್ತರು, ಕೂಡಲೇ ವಿದ್ಯಾರ್ಥಿಗಳ ಸಂಕಷ್ಟಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಶಿಕ್ಷಣ ಸಂಸ್ಥೆಯಿಂದ ಹಾಸ್ಟೆಲ್ ಗಳಿಗೆ ಹೋಗುವುದಕ್ಕೆ ಆ ಮಾರ್ಗದಲ್ಲಿ ಬಸ್ ಗಳನ್ನೇ ಬಿಟ್ಟಿಲ್ಲ. ಇದರಿಂದಾಗಿಯೂ ತೊಂದರೆ ಆಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಎಬಿವಿಪಿ ಕಾರ್ಯಕಾರ್ತರು ಖುದ್ದು ಡಿಸಿಗಳೇ ಬಂದು ಮನವಿ ಸ್ವೀಕರಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರಸ್ತೆ ತಡೆ ನಡೆಸಿದ್ದರು. ಪರಿಣಾಮ ಒಂದು ಗಂಟೆಗೂ ಅಧಿಕ ಸಮಯ ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಬಳಿಕ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ವಿಜಯ್ ಗೌಡರ್ ಸೇರಿದಂತೆ ಎಬಿವಿಪಿ ಕಾರ್ಯಕರ್ತರು ಭಾಗವಹಿಸಿದ್ದರು.
https://www.suddikanaja.com/2021/03/04/abvp-protest-for-restart-bus-facility-in-shivamogga/