ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಇನ್ನಷ್ಟು ಗಂಭೀರತೆ ಪಡೆದಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಿರ್ದೇಶನ ನೀಡಿದ್ದೇ ಪೊಲೀಸ್ ಇಲಾಖೆ ಮಂಗಳವಾರ ಇಬ್ಬರನ್ನು ಬಂಧಿಸಿತ್ತು. ತದನಂತರ ಕೂಡ ತನಿಖೆ ಮುಂದುವರಿದಿದ್ದು ಇನ್ನಷ್ಟು ಜನ ಆರೋಪಿಗಳು ಖಾಕಿ ಸುಪರ್ದಿಗೆ ಸಿಲುಕಿದ್ದಾರೆ.
ದನಗಳನ್ನು ಕಳ್ಳತನ ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆಯೂ ದಾಳಿ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರು ಜನರನ್ನು ಬಂಧಿಸಲಾಗಿದ್ದು, ಒಟ್ಟು 19 ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾಳೂರು ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಿ 4 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಮಾಂಸಕ್ಕಾಗಿ ಹಸುಗಳನ್ನು ಕಳ್ಳಸಾಗಾಣಿಕೆ ಮೂಲಕ ತಂದು ಕಟ್ಟಿಹಾಕಿದ್ದ ಮತ್ತು ಮಾಂಸ ಮಾರಾಟ ಮಾಡುತ್ತಿದ್ದ ಒಟ್ಟು 6 ಜನ ಆರೋಪಿಗಳ ವಿರುದ್ಧ ದೊಡ್ಡಪೇಟೆ ಪೆÇಲೀಸ್ ಠಾಣೆಯಲ್ಲಿ 1, ತುಂಗಾನಗರ ಪೆÇಲೀಸ್ ಠಾಣೆಯಲ್ಲಿ 3 ಸೇರಿ ಒಟ್ಟು 4 ಪ್ರಕರಣಗಳನ್ನು ದಾಖಲಿಸಲಾಗಿದೆ.
ಏನಿದು ಪ್ರಕರಣ, ಗಂಭೀರತೆ ಪಡೆಯಲೇನು ಕಾರಣ?
ಮಂಗಳವಾರ ಮಾಳೂರಿಂದ ಬೆಜ್ಜುವಳ್ಳಿ ಕಡೆಗೆ ಗೂಡ್ಸ್ ವಾಹನದಲ್ಲಿ ಹಸು ಹಾಗೂ ಎಮ್ಮೆಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದವರನ್ನು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಹೋಗಿ ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳು ವಾಹನವನ್ನು ಹತ್ತಿಸಿದ್ದರು. ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಸಹೋದರರಾದ ಕಿರಣ್(23) ಮತ್ತು ಚರಣ್ (24) ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
READ | ಅಡುಗೆ ಅನಿಲ ಬೆಲೆಯಲ್ಲಿ ನಿರಂತರ ಏರಿಕೆ, ಕಳೆದ 10 ತಿಂಗಳ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ
ದನಗಳ್ಳರನ್ನು ತಡೆಯಲು ಯತ್ನಿಸಿದ ಯುವಕರ ಮೇಲೆ ಪಿಕ್ ಅಪ್ ವಾಹನ ಹತ್ತಿಸಿದ ವಿಚಾರ ವೈರಲ್ ಆಗಿದ್ದೇ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಹಿಂದೂ ಪರ ಸಂಘಟನೆಗಳು ಘಟನೆಯನ್ನು ಖಂಡಿಸಿದ್ದರು. ಪೊಲೀಸರು ಜಾಗೃತರಾಗಿ ಆರೋಪಿಗಳಾದ ಟಿಪ್ಪುನಗರ ನವೀದ್ (29) ಮತ್ತು ತೀರ್ಥಹಳ್ಳಿಯ ಶ್ರೀಧರ್ (49) ಎಂಬುವವರನ್ನು ಬಂಧಿಸಲಾಗಿತ್ತು. ಮುಂದುವರಿದು ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ದನಗಳನ್ನು ಖರೀದಿಸುತಿದ್ದವರ ಮೇಲೆಯೇ ದಾಳಿ ನಡೆಸಿದ್ದಾರೆ. ಆರೋಪಿಗಳ ವಿರುದ್ಧ THE KARNATAKA PREVENTION OF SLAUGHTER AND PRESERVATION OF CATTLE ORDINANCE-2020 ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
https://www.suddikanaja.com/2021/01/25/action-against-illegal-slaughterhouse-in-shivamogga/