ಸುದ್ದಿ ಕಣಜ.ಕಾಂ | KARNATAKA | JOB JUNCTION
ಶಿವಮೊಗ್ಗ: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಪರವಾನಿಗೆ ಭೂಮಾಪಕರುಗಳ ಕೊರತೆ ಇದ್ದು 3,000 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಪರವಾನಿಗೆ ನೀಡಲಾದ ಭೂಮಾಪಕರಿಗೆ ಸರ್ಕಾರದ ಆದೇಶದಂತೆ ನಿಗದಿಪಡಿಸಿರುವ ಪ್ರಕಾರ ಪ್ರತಿ ಅಳತೆ ಕಾರ್ಯಕ್ಕೆ ಇಲಾಖೆಯಿಂದ ಸೇವಾ ಶುಲ್ಕವನ್ನು ನೀಡಲಾಗುವುದು.
ಭೂಮಾಪನ ಕೆಲಸ ನಿರ್ವಹಿಸಲು ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಮೊದಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿರ್ದಿಷ್ಟಪಡಿಸಿದ ಜಿಲ್ಲಾ ಕೇಂದ್ರಗಳಲ್ಲಿ 2022 ರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ.
READ | ಶಿವಮೊಗ್ಗ-ತುಮಕೂರು ನಡುವೆ ಹೊಸ ರೈಲು ಸಂಚಾರ, ಎಷ್ಟು ಬೋಗಿ, ಯಾವಾಗಿಂದ ಆರಂಭ, ಎಲ್ಲೆಲ್ಲಿ ನಿಲುಗಡೆ
ಪ್ರಕಟವಾಬೇಕಿದೆ ಪರೀಕ್ಷೆ ದಿನಾಂಕ
ಪರೀಕ್ಷೆಯ ಖಚಿತ ದಿನಾಂಕವನ್ನು ವೆಬ್ಸೈಟ್ ವಿಳಾಸ rdservices.karnataka.gov.in ರಲ್ಲಿ ಮತ್ತು ದಿನಪತ್ರಿಕೆಗಳಲ್ಲಿ 15 ದಿನ ಮುಂಚಿತವಾಗಿ ಪ್ರಚೂರಪಡಿಸಲಾಗುವುದು. ನಿಗದಿಪಡಿಸಲಾದ ಅರ್ಜಿಗಳನ್ನು ಮೇಲ್ಕಂಡ ಇಲಾಖೆ ವೆಬ್ಸೈಟಿನಲ್ಲಿಯೇ ಪ್ರಕಟಿಸಲಾಗಿದ್ದು ಆನ್ಲೈನ್ ಮುಖಾಂತರ ಸಲ್ಲಿಸಬೇಕು. ಒಬ್ಬ ಅಭ್ಯರ್ಥಿಯು ಆನ್ಲೈನ್ ನಲ್ಲಿ ಒಂದು ಅರ್ಜಿಯನ್ನು ಸಲ್ಲಿಸುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿರುತ್ತದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿರುತ್ತದೆ.
ಅರ್ಜಿ ಶುಲ್ಕ ₹1,000 ಆಗಿದ್ದು ಇಲಾಖೆ ವೆಬ್ಸೈಟ್ rdservices.karnataka.gov.in ನಲ್ಲಿ ಕ್ಲಿಕ್ ಮಾಡಿದಾಗ ಆನ್ಲೈನ್ ಅರ್ಜಿ ಲಿಂಕ್ ಮೂಡುತ್ತದೆ. ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಇರುತ್ತದೆ. ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಳ್ಳುವಂತೆ ಸೂಚಿಸಲಾಗಿದೆ.
READ | ಎಸ್ಸೆಸ್ಸೆಲ್ಸಿ ಮೇಲ್ಪಟ್ಟವರಿಗೆ ಶಿವಮೊಗ್ಗದಲ್ಲಿ ಉದ್ಯೋಗ ಅವಕಾಶ
ಅಭ್ಯರ್ಥಿ ಹೊಂದಿರಬೇಕಾದ ವಿದ್ಯಾರ್ಹತೆ
ಕನಿಷ್ಠ ಪದವಿ ಪೂರ್ವ ಶಿಕ್ಷಣ(ಪಿಯುಸಿ) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12ನೇ ತರಗತಿ ಸಿಬಿಎಸ್.ಸಿ ಅಥವಾ ಐಸಿಎಸ್.ಇ ಇವುಗಳಲ್ಲಿ ವಿಜ್ಞಾನ ವಿಷಯ ಪಡೆದು ಗಣಿತ ವಿಷಯದಲ್ಲಿ ಶೇ.60 ಕ್ಕಿಂತ ಕಡಿಮೆ ಇಲ್ಲದಂತೆ ಅಂಕ ಪಡೆದು ಉತ್ತೀರ್ಣರಾಗಿರಬೇಕು. ಅಥವಾ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ(ಸಿವಿಲ್)/ ಬಿ.ಟೆಕ್(ಸಿವಿಲ್)/ ಸಿವಿಲ್ ಎಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಆ್ಯಂಡ್ ಸಿಟಿ ಸರ್ವೇಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ರಾಜ್ಯ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ನಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕೇಂದ್ರ ಅಥವಾ ರಾಜ್ಯ ಸರ್ಕಾರಿ ವಲಯಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಿರುತ್ತಾರೆ.
ಅರ್ಜಿ ಸಲ್ಲಿಸಲು ವಯೋಮಿತಿ
ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಠ 65 ವರ್ಷ ಮೀರಿರಬಾರದು. ಜಿಲ್ಲಾವಾರು ಅವಶ್ಯವಿರುವ ಭೂಮಾಪಕರ ಸಂಖ್ಯೆ ನಿಗದಿಪಡಿಸಿದ್ದು ಶಿವಮೊಗ್ಗ ಜಿಲ್ಲೆಗೆ 127 ಸಂಖ್ಯೆ ನಿಗದಿಪಡಿಸಲಾಗಿದೆ. ಅರ್ಹತಾ ಷರತ್ತುಗಳು, ಆಯ್ಕೆಯ ವಿಧಾನ, ತರಬೇತಿ ಸೇರಿದಂತೆ ಇತರೆ ಸೂಚನೆಗಳಿಗೆ ಇಲಾಖಾ ವೆಬ್ಸೈಟ್ ನಲ್ಲಿ ಮಾಹಿತಿ ಪಡೆಯಬಹುದು ಎಂದು ಆಯುಕ್ತರು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ, ಬೆಂಗಳೂರು ಪ್ರಕಟಣೆ ತಿಳಿಸಿದೆ.
https://www.suddikanaja.com/2021/06/18/ugc-green-signal-for-online-course-start-in-kuvempu-university/