ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಸಂಜೀವಿನಿ- ಕೆ.ಎಸ್.ಆರ್.ಎಲ್.ಪಿ.ಎಸ್. (Karnataka State Rural Livelihood Promotion Societ)ನ ಡಿಡಿಯುಜಿಕೆವೈ (Deen Dayal Upadhyaya Grameen Kaushalya Yojana) ಯೋಜನೆಯಡಿ ಡಿಸೆಂಬರ್ 21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರ ವರೆಗೆ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿ(ATNCC)ನಲ್ಲಿ ಉದ್ಯೋಗ ಮೇಳ (Job Fair) ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ತಿಳಿಸಿದ್ದಾರೆ.
15 ಖಾಸಗಿ ಕಂಪನಿಗಳು ಭಾಗಿ
ಉದ್ಯೋಗ ಮೇಳದಲ್ಲಿ 15 ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳು ಇದರ ಸದುಪಯೋಗ ಪಡೆಯಬಹುದು.
ಆಸಕ್ತರು https://forms.gle/9cQCbgUgxTtAUn2u6 ಗೂಗಲ್ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-255294 ಅನ್ನು ಸಂಪರ್ಕಿಸಬಹುದು.