ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ, ಡಿ.ಕೆ.ಶಿವಕುಮಾರ್ ಅವರ ವಿರುದ್ಧ ನಗರದಲ್ಲಿ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ.
ಸಚಿವ ಈಶ್ವರಪ್ಪ ಮಾಡಿರುವ ಆರೋಪಗಳೇನು?
- ಕಾಂಗ್ರೆಸ್ ಪಾದಯಾತ್ರೆಯಿಂದ ರಾಜ್ಯದ ಜನರಿಗೆ ನೀರು ಪೂರೈಕೆಯಾಗಲ್ಲ, ಕೊರೊನಾ ಹಬ್ಬಲಿದೆ.
- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಾದಯಾತ್ರೆಯ ಮೂಲಕ `ಚಾಂಪಿಯನ್’ ಆಗಲು ಹೊರಟಿದ್ದಾರೆ. ಮುಖ್ಯಮಂತ್ರಿ ಆಗುವ ಕನಸು ಹೊತ್ತಿದ್ದಾರೆ. ಆದರೆ, ಅದು ಸಾಧ್ಯವಿಲ್ಲ.
- ಕೊರೊನಾ ವೈರಾಣುವಿನ ಸೋಂಕು ಕಾಂಗ್ರೆಸ್ ಕಾರ್ಯಕರ್ತರಿಗೆ ಹಬ್ಬಿಸುವ ಅಧಿಕಾರ ಸೋನಿಯಾ ಗಾಂಧಿ ಅವರು ನೀಡಿದ್ದಾರಾ? ಇಲ್ಲಿ ಪಾಲ್ಗೊಂಡವರು ರಾಜ್ಯದ ನಾನಾ ಜಿಲ್ಲೆಗಳಿಗೆ ವಾಪಸ್ ಹೋಗುವುದರಿಂದ ಅವರ ಮೂಲಕ ಸೋಂಕು ಹರಡುವ ಸಾಧ್ಯತೆಯೂ ಇದೆ.
- ಸಿದ್ದರಾಮಯ್ಯ ಅವರು ಜ್ವರದಿಂದ ಈಗಾಗಲೇ ವಾಪಸ್ ಬಂದಿದ್ದಾರೆ. ಅವರೆಲ್ಲರ ಆರೋಗ್ಯದ ಹಿತಕ್ಕಾಗಿಯೇ ಪಾದಯಾತ್ರೆ ಬೇಡ ಎಂಬ ಸಲಹೆ ನೀಡಿದ್ದೆ. ಆದರೆ, ಕಾಂಗ್ರೆಸ್ ಇದರಲ್ಲೂ ರಾಜಕೀಯ ಮಾಡುತ್ತಿದೆ.