ಸುದ್ದಿ ಕಣಜ.ಕಾಂ | TALUK | CRIME NEWS
ಶಿಕಾರಿಪುರ: ಲಘು ಸಾಗಣೆ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, 16 ಜನ ಗಾಯಗೊಂಡ ಘಟನೆ ತಾಲೂಕಿನ ತರಲಘಟ್ಟ ಸಮೀಪ ಸಂಭವಿಸಿದೆ.
ಅಂಬಾರಗೊಪ್ಪದ ಗಂಗ್ಯಾ ನಾಯ್ಕ್ (49) ಮೃತಪಟ್ಟ ವ್ಯಕ್ತಿ. ಕೂಲಿ ಕೆಲಸಕ್ಕೆಂದು ಸರಕು ಲಘು ಸಾಗಣೆ ವಾಹನದಲ್ಲಿ ತೆರಳಿ ಕೂಲಿ ಹೊಂದಾಣಿಕೆ ಆಗಿಲ್ಲವೆಂಬ ಕಾರಣಕ್ಕೆ ವಾಪಸ್ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ವೇಗವಾಗಿ ಬಂದ ಟ್ರ್ಯಾಕ್ಟರ್ ಕೂಲಿ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಗಂಗ್ಯಾ ನಾಯ್ಕ್ ಅವರ ತಲೆಯ ಭಾಗಕ್ಕೆ ಬಲವಾದ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಗಾಯಗೊಂಡ ಕುಮಾರ್ ನಾಯ್ಕ್, ಗೀತಾ ಬಾಯಿ, ಸರೋಜಿಬಾಯಿ, ವಿನೋದನಬಾಯಿ, ಚಂದÀ್ರು ಸೇರಿದಂತೆ ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.