ಸುದ್ದಿ ಕಣಜ.ಕಾಂ | TALUK | CRIME NEWS
ಹೊಸನಗರ: ಅಡಿಕೆ ಕಳ್ಳತನ ಮಾಡಿದ ಅಡಿಕೆ ವ್ಯಾಪಾರಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆಲಗೇರಿ ಮಂಡ್ರಿ ಗ್ರಾಮದ ಅಡಿಕೆ ವ್ಯಾಪಾರಿ ರಹೀಮ್ ಸಾಬ್ ಎಂಬುವವರನ್ನು ಬಂಧಿಸಲಾಗಿದೆ. ಈತ ಬೆಟ್ಟದಮಲ್ಲಪ್ಪದ ಕೃಷಿಕ ಆದರ್ಶ್ ಅವರ ಮನೆಯ ಆವರಣದಲ್ಲಿ ಒಣಗಿ ಹಾಕಿದ್ದ ಅಡಿಕೆಯನ್ನು ಕಳ್ಳತನ ಮಾಡಲಾಗಿತ್ತು.
ಆಗ ಅಂದಾಜು 1.20 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಲಾಗಿದ್ದು, ಈ ಸಂಬಂಧ ಹೊಸನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತನ ಬಳಿಯಿಂದ ಕೃತ್ಯಕ್ಕೆ ಬಳಸಿದ ಬೈಕ್, ಏಳು ಚೀಲ ಸಿಪ್ಪೆಗೋಡು ಅಡಿಕೆ, ಮೂರು ಚೀಲ ಚಾಲಿ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ.