ಸುದ್ದಿ ಕಣಜ.ಕಾಂ | TALUK | CRIME NEWS
ಹೊಸನಗರ: ತಾಲೂಕಿನ ಹುಂಚಾ ಬಳಿಯ ಹೊಂಡಲಗದ್ದೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ತಿಮ್ಮಪ್ಪ ಎಂಬುವವರ ಮನೆಯಲ್ಲಿ ಮರದ ತುಂಡುಗಳನ್ನು ಚೀಲದಲ್ಲಿ ತುಂಬಿಡಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಗ ಆರೋಪಿ ಪರಾರಿಯಾಗಿದ್ದಾನೆ. ಅಂದಾಜು 4 ಲಕ್ಷ ರೂಪಾಯಿ ಮೌಲ್ಯದ 60 ಕೆಜಿ ಶ್ರೀಗಂಧವನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಸಂಚಾರಿ ದಧಳದ ಅರಣ್ಯಾಧಿಕಾರಿ ಸಂಜಯ್, ವಲಯ ಅರಣ್ಯಾಧಿಕಾರಿ ಮಧುಕರ್, ಡಿಆರ್.ಎಫ್.ಒ ಅಶೋಕ್ ಇತರರು ಕಾರ್ಯಾಚರಣೆ ನಡೆಸಿದ್ದಾರೆ.