ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್ ನಲ್ಲಿ ದಿಢೀರ್ ಬೆಂಕಿ ತಗುಲಿ ಗ್ಯಾರೇಜ್ ನಲ್ಲಿದ್ದ ವಾಹನಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ರಿಪೇರಿಗೆಂದು ವಾಹನಗಳನ್ನು ನಿಲ್ಲಿಸಿದ್ದು ಇದರಲ್ಲಿಯೇ ಬೆಂಕಿ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ. ಆದರೆ, ಬೆಂಕಿ ತಗುಲುವುದುಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ.
READ | ಮಕ್ಕಳಲ್ಲಿ ಕೋವಿಡ್ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ಇದನ್ನು ಮಾಡಿ, ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ್ ಸರ್ಜಿ ಸಲಹೆಗಳೇನು?
ನಿನ್ನೆ ಭಾನುವಾರವಾದ್ದರಿಂದ ಆಟೋ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಜನಸಂಚಾರ ಕಡಿಮೆ ಇತ್ತು. ಹೀಗಾಗಿ, ಬೆಂಕಿ ತಗುಲಿರುವ ವಿಚಾರ ತಿಳಿದುಬಂದಿಲ್ಲ. ಸ್ಥಳೀಯರು ಹೊಗೆ ಬರುತ್ತಿರುವುದನ್ನು ಗಮನಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್, ಠಾಣಾಧಿಕಾರಿ ಪ್ರವೀಣ್, ಸಿಬ್ಬಂದಿ ವರ್ಗ ದವರು ಕಾರ್ಯಚರಣೆ ಯಲ್ಲಿ ಬಾಗವಹಿಸಿದ್ದರೂ ವಿನೋಬನಗರ ಪೆÇಲೀಸ್ ಠಾಣೆಯ ಇನ್ ಸ್ಪೆಕ್ಟರ್ ಬೇಟಿ ನೀಡಿದ್ದಾರೆ
ಬಂದು ಬೆಂಕಿ ನಂದಿಸಿದ್ದಾರೆ.
ಆಟೋ ಕಾಂಪ್ಲೆಕ್ಸ್ ನಲ್ಲಿ ತಪ್ಪಿದ ಭಾರಿ ದುರಂತ
ಸಕಾಲಕ್ಕೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಅಧಿಕಾರಿಗಳು, ಸಿಬ್ಬಂದಿ ಅನಾಹುತವನ್ನು ತಪ್ಪಿಸಿದ್ದಾರೆ. ಮೂರು ಕಾರುಗಳು ಅಗ್ನಿಗೆ ಆಹುತಿಯಾಗಿದ್ದು, ಒಂದು ಬಸ್, ಟ್ರಾನ್ಸ್ ಫಾರ್ಮರ್ ಗೆ ಬೆಂಕಿ ಹಬ್ಬುವುದನ್ನು ತಪ್ಪಿಸಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.suddikanaja.com/2021/03/05/fire-accident-in-sorab/