ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ತಮಿಳುನಾಡಿನ ಓಂಶಕ್ತಿ ದರ್ಶನ ಪಡೆದು ವಾಪಸ್ ಶಿವಮೊಗ್ಗಕ್ಕೆ ಬಂದಿದ್ದ ಆರು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ, ಭದ್ರಾವತಿ ಸೇರಿದಂತೆ ನಾನಾ ಭಾಗದಿಂದ 4,000 ಅಧಿಕ ಮಹಿಳೆಯರು, ಮಕ್ಕಳು ತಮಿಳುನಾಡಿಗೆ ಹೋಗಿದ್ದರು. ತಮಿಳುನಾಡಿನಲ್ಲಿ ಕೊರೊನಾ ಸೋಂಕು ಹರಡುತ್ತಿರುವುದರಿಂದ ಅವರು ಶಿವಮೊಗ್ಗಕ್ಕೆ ಬಂದಿದ್ದೇ ಪರೀಕ್ಷೆಗೆ ಒಳಪಡಿಸಲಾಗಿದೆ.
ತಮಿಳುನಾಡಿನ ಮೇಲ್ ಮರತ್ತೂರಿನಲ್ಲಿರುವ ಓಂ ಶಕ್ತಿ ದೇವಸ್ಥಾನಕ್ಕೆ ಶಿವಮೊಗ್ಗದಿಂದ 82 ಬಸ್ಸುಗಳಲ್ಲಿ 4300ಕ್ಕ್ಕೂ ಅಧಿಕ ಜನರು ಹೋಗಿದ್ದರು. ಯಾತ್ರೆ ಮುಗಿಸಿ ಮರಳಿದವರಿಗೆ ತಪಾಸಣೆಗೆ ಒಳಪಡಿಸಿದ್ದು, ಅವರಲ್ಲಿ ಆರು ಮಂದಿಗೆ ಪಾಸಿಟಿವ್ ಬಂದಿದೆ.
ದೇವಸ್ಥಾನಕ್ಕೆ ಹೋಗಿ ಬಂದವರನ್ನು ರ್ಯಾಂಡಮ್ ಟೆಸ್ಟ್ ಮಾಡಲಾಗುತ್ತಿದೆ. ಮೂರ್ನಾಲ್ಕು ದಿನಗಳ ಬಳಿಕ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ. ಹೀಗಾಗಿ, ಅವರೆಲ್ಲರ ಮೇಲೆ ತೀವ್ರ ನಿಗಾ ಇಡಲಾಗಿದೆ.
ಓಂಶಕ್ತಿ ದರ್ಶಣ ಪಡೆದು ಮರಳಿರುವ ಮಂಡ್ಯ ಮೂಲದ ಕೆಲವರಲ್ಲಿ ಸೋಂಕು ದೃಢಪಟ್ಟಿದ್ದು, ಅದರ ಬೆನ್ನಲ್ಲೇ ಶಿವಮೊಗ್ಗದಲ್ಲೂ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ, ಇನ್ನಷ್ಟು ಆತಂಕ ಸೃಷ್ಟಿಯಾಗಿದೆ.
https://www.suddikanaja.com/2021/08/31/woman-arrested-fo-allegedly-torturing-her-son/