ಸುದ್ದಿ ಕಣಜ.ಕಾಂ | CITY | PROTEST
ಶಿವಮೊಗ್ಗ: ಭೂಸೇನೆ, ವಾಯುಸೇನೆ ಹಾಗೂ ನೌಕಾ ಸೇನೆ ರೀತಿಯಲ್ಲಿಯೇ ದೇಶದ ಎಲ್ಲ ರಾಜ್ಯಗಳ ಪೊಲೀಸ್ ಪಡೆಗಳನ್ನು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಜನತಾ ದಳ(ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ಆಗ್ರಹಿಸಿದ್ದಾರೆ. ನಗರದ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಸೋಮವಾರ ಏಕಾಂಗಿಯಾಗಿ ಧರಣಿ ಸತ್ಯಾಗ್ರಹ ನಡೆಸಿದರು.
READ | ಬೊಮ್ಮನಕಟ್ಟೆಯಲ್ಲಿ ಪೊಲೀಸ್ ವಾಹನದ ಮೇಲೆ ಕಲ್ಲು ತೋರಾಟ, ಕಾರಿನ ಹಿಂಭಾಗ ಪೀಸ್ ಪೀಸ್
ಒಂದುವೇಳೆ, ಪೊಲೀಸ್ ಇಲಾಖೆಗಳನ್ನು ಕೇಂದ್ರದ ವ್ಯಾಪ್ತಿಗೆ ಒಳಪಡಿಸಿದರೆ, ಅಪರಾಧಗಳನ್ನು ತಡೆಯಲು ಸಹಕಾರಿ ಆಗಲಿದೆ. ಎಲ್ಲ ಪೊಲೀಸರಿಗೂ ಏಕರೂಪದ ಸಮವಸ್ತ್ರ, ಏಕರೂಪದ ಭತ್ಯೆ, ವರ್ಗಾವಣೆ, ಬಡ್ತಿ ಒಂದೇ ರೀತಿಯಲ್ಲಿ ನೀಡಿದರೆ, ಪೊಲೀಸರು ಆತ್ಮವಿಶ್ವಾಸ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾಡಳಿತದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಪೊಲೀಸ್ ಪಡೆಯನ್ನು ಕೇಂದ್ರ ಸರ್ಕಾರದ ವ್ಯಾಪ್ತಿಗೆ ತಂದರೆ, ಭ್ರಷ್ಟಾಚಾರ, ಕೊಲೆ, ಸುಲಿಗೆ, ಅತ್ಯಾಚಾರ, ಅಪಹರಣ, ಕಳ್ಳತನ, ಮಾದಕ ವಸ್ತುಗಳ ಸಾಗಾಣಿಕೆ ಸೇರಿದಂತೆ ದೊಡ್ಡ ದೊಡ್ಡ ಅಪರಾಧಗಳನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
https://www.suddikanaja.com/2021/01/30/hunger-strike-at-gandhi-park/