ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಗಾಂಜಾ ಮಾರಾಟದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ಮಾಡಿದ ತುಂಗಾನಗರ ಪೊಲೀಸರು ಒಬ್ಬ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ.
READ | ಹಿಜಾಬ್, ಕೇಸರಿ ಶಾಲು ವಿವಾದ, ಶಿವಮೊಗ್ಗದಲ್ಲಿ ಖಾಕಿ ಖದರ್
ಟಿಪ್ಪುನಗರದ ವಾಸಿ ಅಡ್ಡು ಅಲಿಯಾಸ್ ಇಬ್ರಾಹಿಂ (28) ಬಂಧಿತ. ಪದ್ಮಾ ಟಾಕೀಸ್ ಕಡೆಯಿಂದ ಅಂಬೇಡ್ಕರ್ ನಗರದ ಕಡೆಗೆ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದಾನೆ ಎಂದು ಬಂದ ಖಚಿತ ಮಾಹಿತಿಯ ಮೇರೆಗೆ ತುಂಗಾನಗರ ಪಿಎಸ್.ಐ ನೇತೃತ್ವದಲ್ಲಿ ಸಿಬ್ಬಂದಿಯನ್ನೊಳಗೊಂಡ ತಂಡ ದಾಳಿ ನಡೆಸಿದೆ.
ಅಂದಾಜು 97 ಸಾವಿರ ರೂಪಾಯಿ ಮೌಲ್ಯದ 3 ಕೆಜಿ 250 ಗ್ರಾಂ ತೂಕದ ಮಾದಕ ವಸ್ತು ಗಾಂಜಾವನ್ನು ವಶ ಪಡಿಸಿಕೊಂಡು ಆರೋಪಿ ವಿರುದ್ಧ ತುಂಗಾನಗರ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗುತ್ತಿದೆ.