ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಜಿಲ್ಲೆಯಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರ ಸಂಘರ್ಷಕ್ಕೆ ತಿರುಗಿದ ಪರಿಣಾಮ ಉಂಟಾದ ಗಲಾಟೆ ಸಂಬಂಧ ಒಟ್ಟು 55 ಜನರ ಮೇಲೆ ಪ್ರಕರಣ ದಾಖಲಾಗಿದೆ. ಇದುವರೆಗೆ 9 ಪ್ರಕರಣಗಳಲ್ಲಿ 9 ಜನರನ್ನು ಬಂಧಿಸಲಾಗಿದೆ.
ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ 25ಕ್ಕೂ ಅಧಿಕ, ಸಾಗರದಲ್ಲಿ ನಡೆದ ಘಟನೆಯಲ್ಲಿ 30ಕ್ಕೂ ಅಧಿಕ ಜನರ ಮೇಲೆ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.