ಸುದ್ದಿ ಕಣಜ.ಕಾಂ | CITY | SECTION 144
ಶಿವಮೊಗ್ಗ: ಹಿಜಾಬ್, ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಫೆಬ್ರವರಿ 16ರ ಬೆಳಗ್ಗೆ 6 ಗಂಟೆಯಿಂದ 19ರ ರಾತ್ರಿ 9 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿ ಆದೇಶಿಸಲಾಗಿದೆ.
ನಗರದಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಹಸೀಲ್ದಾರ್ ಎನ್.ಜೆ.ನಾಗರಾಜ್ ಅವರು ಆದೇಶಿಸಿದ್ದಾರೆ.
ಆದೇಶದಲ್ಲಿ ಏನಿದೆ?
- ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದಂತೆ, ವಸ್ತ್ರ ಸಂಹಿತೆಯನ್ನು ಯಾವುದೇ ಜಾತಿ ಧರ್ಮ ಸೂಚಕದ ವಸ್ತ್ರಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಧರಿಸುವ, ಪ್ರದರ್ಶಿಸುವ ಮೂಲಕ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸುವಂತಹ ಸನ್ನಿವೇಶಗಳನ್ನು ಸೃಷ್ಟಿಸುವುದನ್ನು ನಿಷೇಧಿಸಲಾಗಿದೆ.
- ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ಶಿಕ್ಷಣ ಸಮಿತಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಂಘ, ಸಂಘಟಿಸುವುದು ಪ್ರಚೋದಿಸುವುದನ್ನು ನಿಷೇಧಿಸಲಾಗಿದೆ.
- ಶಿಕ್ಷಣ ಸಂಸ್ಥೆಗಳಲ್ಲಿ ಕೇಸರಿ ಶಾಲು, ಹಿಜಾಬ್ ಅಥವಾ ಇನ್ನು ಯಾವುದೇ ಧಾರ್ಮಿಕ ವಿಷಯಗಳ ಕುರಿತು ಅನಗತ್ಯ ಚರ್ಚೆ ಹುಟ್ಟುಹಾಕಿ ಕೋಮು ಸೌಹಾರ್ದತೆಯನ್ನು ಹಾಳು ಮಾಡತಕ್ಕದ್ದು.
- ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಬಂಧಿಸಿದೆ.
- ಯಾವುದೇ ಮೆರವಣಿಗೆ ಅಥವಾ ಸಭೆ, ಸಮಾರಂಭಗಳನ್ನು ವಿಜಯೋತ್ಸವ, ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇಧಿಸಿದೆ.
- ಶಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಇನ್ನು ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆ ಉಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
- ಯಾವುದೇ ಪಟಾಕಿ, ಸಿಡಿಮದ್ದು ಬಳಸುವುದು, ಕಲ್ಲು, ಕ್ಷಪಣಿಗಳನ್ನು ಎಸೆಯುವುದು ನಿಷೇಧ
- ಯಾವುದೇ ವ್ಯಕ್ತಿ, ಶವಗಳ ಪ್ರತಿಕೃತಿ ಪ್ರದರ್ಶ ಮಾಡುವುದು, ಪ್ರಚೋದನಾಕಾರಿ ಬಹಿರಂಗ ಘೋಷಣೆಗಳನ್ನು ಕೂಗುವುದು ನಿಷಿದ್ಧ.
- ಈಗಾಗಲೇ ಸರ್ಕಾರ ಕಾರ್ಯಕ್ರಮಗಳು ನಿಗದಿಯಾಗಿದದಲ್ಲಿ ಪ್ರಾಧಿಕಾರದ ಅನುಮತಿ ಇಲ್ಲದೇ ಮುಂದುವರಿಯತಕ್ಕದ್ದಲ್ಲ. ಹೀಗೆ ವಿವಿಧ ನಿಯಮಗಳನ್ನು ಹೇರಲಾಗಿದೆ.