ಸುದ್ದಿ ಕಣಜ.ಕಾಂ | DISTRICT | RAILWAY WORKS
ಶಿವಮೊಗ್ಗ: ಭದ್ರಾವತಿಯ ಎಲ್.ಸಿ. 31-ಕಡದಕಟ್ಟೆ, ಶಿವಮೊಗ್ಗದ ಎಲ್.ಸಿ.49 ಸವಳಂಗ ರಸ್ತೆ ಹಾಗೂ ಎಲ್.ಸಿ 54 ಕಾಶಿಪುರ ಗೇಟ್ ರೈಲ್ವೆ ಮೇಲ್ಸೇತುವೆ ಹಾಗೂ ಶಿವಮೊಗ್ಗ ವಿದ್ಯಾನಗರ ಬಳಿಯ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ (BY Raghavendra) ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಿದರು.
ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ, ಭದ್ರಾವತಿಯಲ್ಲಿ ಕಾಮಗಾರಿಗಳನ್ನು ವೀಕ್ಷಿಸಿ, ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು, ವಿಡಿಯೋ ರಿಪೋರ್ಟ್ ವೀಕ್ಷಿಸಿ
ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?
- ರೈಲ್ವೆ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಮೂರು ರೈಲ್ವೆ ಮೇಲ್ಸೇತುವೆ (Railway overbridge-ROB) ಕಾಮಗಾರಿಗಳ ಅಂದಾಜು ವೆಚ್ಚ ₹116.31 ಕೋಟಿಗಳಾಗಿದ್ದು, ಇದರಲ್ಲಿ ಕಾಮಗಾರಿಯ ವೆಚ್ಚದ ಶೇ. 50 ರಷ್ಟು ಹಾಗೂ ಭೂಸ್ವಾಧೀನದ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವು ಭರಿಸಲಿದೆ. ಈ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ₹ 70.05 ಕೋಟಿಗಳ ಅನುದಾನವನ್ನು ಒದಗಿಸಲಾಗುತ್ತಿದೆ. ರೈಲ್ವೆ ಇಲಾಖೆಗೆ ರಾಜ್ಯ ಸರ್ಕಾರದಿಂದ ಈಗಾಗಲೇ ₹ 8.61 ಕೋಟಿ ಹಾಗೂ ಭೂಸ್ವಾಧೀನಕ್ಕಾಗಿ ₹ 20.60 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ.
- ರೈಲ್ವೆ ಇಲಾಖೆಯು ಈ ಮೂರು ಕಾಮಗಾರಿಗಳನ್ನು ನಿರ್ಮಾಣ ಕಂಪನಿಗೆ (ಎಸ್.ಆರ್.ಸಿ. ಕಂಪನಿ) ಗುತ್ತಿಗೆ ನೀಡಿದೆ. ಈಗಾಗಲೇ ಮೂರು ಕಾಮಗಾರಿಗಳು ಭರದಿಂದ ಜರುಗುತ್ತಿದೆ. ಮುಂದಿನ 10-12 ತಿಂಗಳುಗಳಲ್ಲಿ ಪೂರ್ಣಗೊಳಿಸಲಾಗುವುದು.
- ಜಿಲ್ಲಾಡಳಿತವು ಭೂಸ್ವಾಧೀನ ಹಾಗೂ ಯುಟಿಲಿಟಿ ಶಿಫ್ಟಿಂಗ್ ಗಾಗಿ ಅಗತ್ಯ ಕ್ರಮವನ್ನು ಕೈಗೊಂಡಿದೆ. ಶೀಘ್ರದಲ್ಲಿಯೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಕಾಶಿಪುರ (kashipura) ಹಾಗೂ ಸವಳಂಗ ರಸ್ತೆ (savalanga road) ಮೇಲ್ಸೇತುವೆಗಳಲ್ಲಿ ನಾಗರಿಕರಿಗೆ ನೆರವಾಗುವ ದೃಷ್ಟಿಯಿಂದ ಅಂಡರ್ ಪಾಸ್ (railway under bridge-RUB) ಅನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದರು. - ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ 49ರ ಬದಲಿಗೆ ₹ 60.76 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ಹಾಗೂ ಕೆಳಸೇತುವೆ ನಿರ್ಮಾಣ.
- ಶಿವಮೊಗ್ಗ ನಗರದ ಕಾಶಿಪುರ ರೈಲ್ವೆ ಲೆವೆಲ್ ಕ್ರಾಸಿಂಗ್ 52ರ ಬದಲಿಗೆ ₹ 29.63 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ಹಾಗೂ ಪಿ.ಟಿ. ಕಾಲೋನಿಗೆ ಹೋಗುವ ರಸ್ತೆಯಲ್ಲಿನ ರೈಲ್ವೆ ಲೆವೆಲ್ ಕ್ರಾಸಿಂಗ್ಗೆ ರೈಲ್ವೆ ಕೆಳಸೇತುವೆ ನಿರ್ಮಾಣ.
- ಭದ್ರಾವತಿ ನಗರದ ಕಡದಕಟ್ಟೆ ಬಳಿ ಇರುವ ರೈಲ್ವೆ ಲೆವೆಲ್ ಕ್ರಾಸಿಂಗ್ 34ರ ಬದಲಿಗೆ ರೂ. 25.92 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ.
READ | ಶಿವಮೊಗ್ಗ ಜಿಲ್ಲೆಯ 3 ಕಾಲೇಜುಗಳಿಗೆ ನಾಳೆ ರಜೆ ಘೋಷಣೆ, ಇಲ್ಲಿದೆ ಕಾಲೇಜುಗಳ ಪಟ್ಟಿ
ಕೋಟೆಗಂಗೂರು ಕೋಚಿಂಗ್ ಡಿಪೋ
₹76 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೋಟೆಗಂಗೂರು ಕೋಚಿಂಗ್ ಡಿಪೋವನ್ನು ಕೇಂದ್ರ ಸರ್ಕಾರವು ಶಿವಮೊಗ್ಗದ ಕೋಟೆಗಂಗೂರಿಗೆ ಮಂಜೂರು ಮಾಡಿದೆ. ಈ ಕೋಚಿಂಗ್ ಡಿಪೋಗಾಗಿ ಸುಮಾರು 10 ಎಕರೆ ಖಾಸಗಿ ಭೂಸ್ವಾಧೀನದ ಅಗತ್ಯವಿದ್ದು, KIADB (karnataka industrial area development board) ಸಂಸ್ಥೆ ಈ ಭೂಮಿಯನ್ನು 2 ತಿಂಗಳ ಒಳಗೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಿದೆ.
ರೈಲ್ವೆ ಇಲಾಖೆಯು ರೈಲ್ವೆ ಜಮೀನಿನಲ್ಲಿ ಈಗಾಗಲೇ ಅಗತ್ಯ ಪೂರ್ವ ಸಿದ್ಧತೆಯ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ ಎಂದು ಸಂಸದರು ತಿಳಿಸಿದರು.
ಕೋಟೆಗಂಗೂರಿನಲ್ಲಿ ₹21 ಕೋಟಿಗಳ ಅಂದಾಜು ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಟರ್ಮಿನಲ್ ಸ್ಟೇಷನ್ (turminal station) ಕಾಮಗಾರಿಯ ಟೆಂಡರ್ ಅನ್ನು ಶೀಘ್ರದಲ್ಲಿಯೆ ಕರೆಯಲಾಗುತ್ತದೆ ಎಂದರು.
ರೈಲ್ವೆ ಅಧಿಕಾರಿಗಳಾದ ಶ್ರೀಧರಮೂರ್ತಿ, ಆಂಜನೇಯ ಪ್ರಸಾದ್, ಮುಖ್ಯ ಎಂಜಿನಿಯರ್ ಪ್ರಭಾಕರನ್, ವಿಜಯ್ ಭಾಸ್ಕರ್, ರಾಜ ಕುಮಾರ್, ಬಸವರಾಜಪ್ಪ, ಶಶಿ ತಿವಾರಿ, ಪ್ರಾಜೆಕ್ಟ್ ಮ್ಯಾನೇಜರ್ ಸುಧೀರ್, ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮೇಯರ್ ಸುನೀತಾ ಅಣ್ಣಪ್ಪ ಹಲವರು ಉಪಸ್ಥಿತರಿದ್ದರು.
https://www.suddikanaja.com/2022/02/07/in-the-union-budget-a-grant-of-rs-50-crore-has-been-announced-for-the-shimoga-shikaripura-ranebennur-railway-line-ambitious-project-connect-between-malnad-to-north-karnataka/