ಸುದ್ದಿ ಕಣಜ.ಕಾಂ | DISTRICT | FOREST
ಸಾಗರ: ತಾಲೂಕಿನ ಸಿಗಂದೂರಿಗೆ ತೆರಳುವ ಮಾರ್ಗದಲ್ಲಿ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಹಿಟಾಚಿ ಮತ್ತಿತರ ಯಂತ್ರಗಳ ಮೂಲಕ ಅಗೆಯಲಾಗುತ್ತಿದೆ.
ಶರಾವತಿ ಹಿನ್ನೀರಿನ ಕರೂರು ಹೋಬಳಿಯ ತುಮರಿ ಗ್ರಾಮ ಪಂಚಾಯಿತಿಯ ಕಳಸವಳ್ಳಿಯ ಸರ್ವೇ ನಂಬರ್ 71ರ ಬಳಿ ವನ್ಯಜೀವಿ ವಿಭಾಗಕ್ಕೆ ಸಂಬಂಧಿಸಿದ ಪ್ರದೇಶದಲ್ಲಿ ಅತಿಕ್ರಮವಾಗಿ ಕೆಲಸ ಮಾಡಲಾಗುತ್ತಿದೆ. ಆದರೆ, ವನ್ಯಜೀವಿ ಹಾಗೂ ಅರಣ್ಯ ಇಲಾಖೆಯ ಮೌನ ವಹಿಸಿರವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
READ | ತಾಯಿಯ ತಿಥಿಗೆ ಹೋದಾಗ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಶರಾವತಿ ನದಿ ಕಣಿವೆ ಅಭಯಾರಣ್ಯದ ಮಗ್ಗಲಿನ ಕಳಸವಳ್ಳಿಯ ಸ.ನಂ.71 ರಲ್ಲಿ ಸಿಗಂದೂರು ಸೇತುವೆಗಾಗಿ ವನ್ಯಜೀವಿ ಪ್ರದೇಶದಲ್ಲಿ ಮಣ್ಣು ತೆಗೆಯುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಇಲ್ಲಿನ ಸಮಾಜ ಪರಿವರ್ತನಾ ಟ್ರಸ್ಟ್ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದೆ.
ವನ್ಯಜೀವಿ ವಿಭಾಗಕ್ಕೆ ಸಂಬಂಧಿಸಿದ ಪ್ರದೇಶದಲ್ಲಿ ಅತಿಕ್ರಮವಾಗಿ ಪ್ರವೇಶಿಸಿ ಪರಿಸರಕ್ಕೆ ಹಾನಿ ಉಂಟು ಮಾಡಲಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಲಾಗಿದೆ.
ಕಳೆದೊಂದು ದಿನದಿಂದ ವನ್ಯಜೀವಿ ವಲಯದ ಅರಣ್ಯದಿಂದ ನಿರಂತರವಾಗಿ ಮಣ್ಣು ಸಾಗಾಟ ಮಾಡುತ್ತಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಇದಕ್ಕೆ ಅವಕಾಶ ಇದೇಯೇ ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿz.É ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಂಬಂಧಿಸಿ ಸೇತುವೆ ನಿರ್ಮಾಣ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಎಂದು ಆಗ್ರಹಿಸಿದ್ದಾರೆ.
READ | ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಸಾಮಾನ್ಯ ಜನರು ಅರಣ್ಯ ಹಾಗೂ ವನ್ಯಜೀವಿ ಪ್ರದೇಶದಲ್ಲಿ ಒತ್ತುವರಿ ಮಾಡಿದರೆ ಹಲವು ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಆದರೆ, ಎಕರೆ ಗಟ್ಟಲೆ ಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತಿಕ್ರಮಣ ತಡೆಗಟ್ಟಲು ಅರಣ್ಯ ಇಲಾಖೆ ಹಾಗೂ ವನ್ಯಜೀವಿ ವಿಭಾಗದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಶರಾವತಿ ನದಿ ಒಡಲಿನಲ್ಲೇ ಭೂಮಾಫಿಯಾದ ನಂಟು ಹೊಂದಿರುವ ಬಗ್ಗೆ ಸಮಾಜ ಪರಿವರ್ತನಾ ಟ್ರಸ್ಟ್ ಸಮಗ್ರ ತನಿಖೆಗೆ ಆಗ್ರಹಿಸಿದೆ.
https://www.suddikanaja.com/2022/01/29/needs-protection-to-pangolin-in-western-ghats/