ಸುದ್ದಿ ಕಣಜ.ಕಾಂ | DISTRICT | TALENT JUNCTION
ಶಿವಮೊಗ್ಗ: ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಜಿಲ್ಲೆಯ ಇಬ್ಬರು ಆಯ್ಕೆಯಾಗಿದ್ದಾರೆ.
ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ನೆಹರೂ ಯುವ ಕೇಂದ್ರದಿಂದ ರಾಷ್ಟ್ರೀಯ ಯುವ ಸಂಸತ್ತು-2022 ಪ್ರಯುಕ್ತ ಫೆ.23 ರಂದು ಉಡುಪಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಯಿಂದ 5 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಅವರಲ್ಲಿ ಎಂ.ಅನಘ ಪ್ರಥಮ ಮತ್ತು ಸುಪ್ರಧ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.