ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಬಜರಂಗ ದಳ ಕಾರ್ಯಕರ್ತ ಹರ್ಷನ ಮನೆಗೆ ಸಂಸದ ಪ್ರತಾಪ್ ಸಿಂಹ ಅವರು ಶನಿವಾರ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ನೀಡಿ 5 ಲಕ್ಷ ರೂಪಾಯಿ ಧನ ಸಹಾಯ ಮಾಡಿದರು.
READ | ಶಿವಮೊಗ್ಗದಿಂದ ವಿಮಾನ ಹಾರಾಟದ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಮುಖ ಬೇಡಿಕೆ ಸಲ್ಲಿಕೆ, ಟಾಪ್ 8 ಡಿಮಾಂಡ್ಸ್
ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ಆರೋಪಗಳನ್ನು ಮಾಡಿದರು.
ಆರೋಪ ನಂ.1- ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ತಾಲಿಬಾನ್ ಸರ್ಕಾರ’ ಬಂದಂತೆ
ಆರೋಪ ನಂ.2- ಹರ್ಷ ಕೊಲೆಯಾಗಿ ಒಂದು ವಾರ ಕಳೆಯುತ್ತಾ ಬಂದರೂ ಕಾಂಗ್ರೆಸ್ ನಾಯಕರಿಗೆ ಆತನ ಕುಟುಂಬಕ್ಕೆ ಸಾಂತ್ವನ ಹೇಳಲು ಸಮಯವಿಲ್ಲ.
ಆರೋಪ ನಂ.3- ರಾಜಕೀಯ ದೃಷ್ಟಿಕೋನದಿಂದ ಒಂದು ವರ್ಗವನ್ನು ಓಲೈಸುವ ಕಾಂಗ್ರೆಸ್ ನಡವಳಿಕೆ ಖಂಡನೀಯವಾಗಿದೆ. ಆದರೆ, ಇದೆಲ್ಲವನ್ನೂ ಹಿಂದೂ ಸಮಾಜ ಗಮನಿಸುತ್ತಿದೆ. ಕೋಮುವಾದಕ್ಕೆ ಬಲಿಯಾದ ಹಿಂದೂ ಯುವಕರ ರಕ್ಷಣೆಗೆ ನಾವೆಲ್ಲ ಬೆಂಗಾವಲಾಗಿ ನಿಲ್ಲುತ್ತೇವೆ.
ಕಟ್ಟುನಿಟ್ಟಿನ ಕಾಯ್ದೆ ಜಾರಿಗೆ ತನ್ನಿ
ಹರ್ಷನ ಹತ್ಯೆ ಮಾಡಿದ ಆರೋಪಿಗಳಿಗೆ ಶಿಕ್ಷೆಯಾಗಬೇಕು. ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವುದನ್ನು ನಿಲ್ಲಿಸಲು ಸರ್ಕಾರ ಕಟ್ಟುನಿಟ್ಟಿನ ಕಾಯ್ದೆ ಜಾರಿ ತರುವ ಅಗತ್ಯವಿದೆ ಎಂದು ಪ್ರತಾಪ್ ಸಿಂಹ ಹೇಳಿದರು.