ಸುದ್ದಿ ಕಣಜ.ಕಾಂ | DISTRICT | HIJAB-SAFFRON CONTROVERSY
ಶಿವಮೊಗ್ಗ: ಹಿಜಾಬ್-ಕೇಸರಿ ಶಾಲು ವಿವಾದದ ಬೆನ್ನಲ್ಲೇ ನಗರದ ವಿವಿಧೆಡೆ ಅಹಿತಕರ ಘಟನೆಗಳು ನಡೆದಿದ್ದು, ಜಿಲ್ಲೆಯಾದ್ಯಂತ ಇಂದು ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.
- ಕೇಸ್ ನಂಬರ್ 1
ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಲು ತೂರಾಟ ಮಾಡಿದ ಗುಂಪಿನ ವಿರುದ್ಧ ಪ್ರಕರಣ ದಾಖಲಾಗಿದೆ. - ಕೇಸ್ ನಂಬರ್ 2
ಬಾಪೂಜಿ ನಗರದ ಕಾಲೇಜಿನಲ್ಲಿ ನಡೆದ ಕಲ್ಲು ತೂರಾಟ ವೇಳೆ ಪೊಲೀಸ್ ವಾಹನ ಜಖಂಗೊಂಡಿದೆ. ಈ ಬಗ್ಗೆ ಸುಮೋಟೊ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. - ಕೇಸ್ ನಂಬರ್ 3
ಟ್ಯಾಂಕ್ ಮೊಹಲ್ಲಾದಲ್ಲಿ ಚೇತನ್ ಎಂಬ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿದೆ. ಈ ಬಗ್ಗೆ ಕೋಟೆ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. - ಕೇಸ್ ನಂಬರ್ 4
ಸಾಗರದಲ್ಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟವಾಗಿದ್ದು, ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. - ಕೇಸ್ ನಂಬರ್ 5
ಶಿಕಾರಿಪುರ ಪಟ್ಟಣದಲ್ಲಿ ಖಾಸಗಿ ಬಸ್ ವೊಂದರ ಮೇಲೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಕಲ್ಲು ತೂರಾಟ ಮಾಡಿ ಸಾರ್ವಜನಿಕ ಆಸ್ತಪಾಸ್ತಿ ಹಾನಿ ಮಾಡಿದ್ದು, ಪ್ರಕರಣ ದಾಖಲಾಗಿದೆ.
READ | ಶಿವಮೊಗ್ಗದಲ್ಲಿ 144 ಜಾರಿ, ಎಷ್ಟು ಜನ ದಿನ ಇರಲಿದೆ ನಿಷೇಧಾಜ್ಞೆ
READ | ಶಿವಮೊಗ್ಗ ಉದ್ವಿಗ್ನ ಸ್ಥಿತಿಯ ಬಗ್ಗೆ ಉಸ್ತುವಾರಿ ಸಚಿವರೇನು ಹೇಳಿದ್ದಾರೆ?
READ | ರಾಜ್ಯದಾದ್ಯಂತ ಶಾಲೆ, ಕಾಲೇಜುಗಳಿಗೆ ಮೂರು ದಿನ ರಜೆ
READ | ಹಿಜಾಬ್-ಕೇಸರಿ ಶಾಲು ಸಂಘರ್ಷ, ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ, ಇಂದು ಎಲ್ಲೆಲ್ಲಿ ಏನೇನಾಯ್ತು?
ಹಿಜಾಬ್-ಕೇಸರಿ ಶಾಲು ಸಂಘರ್ಷ, ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ, ಇಂದು ಎಲ್ಲೆಲ್ಲಿ ಏನೇನಾಯ್ತು?