ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ 2021-22ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್-19ರ ಮಾರ್ಗಸೂಚಿಯಂತೆ ಅನಿರ್ದಿಷ್ಟ ಕಾಲಾವಧಿವರೆಗೂ ಮುಂದೂಡಲಾಗಿದೆ.
ಪ್ರಸ್ತುತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು ಫೆಬ್ರವರಿ 18,19 ಮತ್ತು 20 ರಂದು ರಾಜ್ಯದ 19 ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
READ | ಶಿವಮೊಗ್ಗದಲ್ಲಿ ಹುಲಿ ಗಣತಿ ಆರಂಭ, ಹೇಗೆ ನಡೆಯಲಿದೆ ಗಣತಿ?
ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಬದಲಾದ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ಫೆ. 10ರ ನಂತರವೂ ವೇಳಾಪಟ್ಟಿ ತಲುಪದಿದ್ದರೆ, ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ, ಬೆಂಗಳೂರು – 18, ಇವರನ್ನು ಸಂಪರ್ಕಿಸುವಂತೆ ಪರಿಷತ್ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26623584/ 26612991 ಹಾಗೂ ವೆಬ್ಸೈಟ್ www.kasapa.in ಅನ್ನು ಸಂಪರ್ಕಿಸಲು ತಿಳಿಸಲಾಗಿದೆ.