ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ನಗರದ ನಿವಾಸದಲ್ಲಿ ಬುಧವಾರ ಜನ್ಮ ದಿನಾಚರಣೆಯನ್ನು ಆಚರಿಸಿಕೊಂಡ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಶಪಥ ಮಾಡಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
READ | ಉಕ್ರೇನ್ನಿಂದ ಶಿವಮೊಗ್ಗಕ್ಕೆ ಸೇಫ್ ಆಗಿ ಮರಳಿದ ಮನೀಷಾ
ಮಧು ಬಂಗಾರಪ್ಪ ಹೇಳಿದ್ದೇನು?
- ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಜೊತೆಗೆ, ರಾಜ್ಯ ಮತ್ತು ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟನೆ ಮಾಡಲಾಗುವುದು. ಎಲ್ಲ ಹಿರಿಯರ ಆಶಯವೂ ಇದೇ ಆಗಿದೆ.
- ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರೇ ಹೇಳಿದಂತೆ ಸೋತು ರಾಜಕಾರಣ ಮಾಡುವುದು ಕೂಡ ಒಂದು ಪಾಠವಾಗುತ್ತದೆ. ನಾನು ತೆಗೆದುಕೊಂಡ ರಾಜಕೀಯ ನಿರ್ಧಾರ ಸರಿಯಾಗಿದೆ.
- ಬಗರ್ ಹುಕುಂ ಸಾಗುವಳಿದಾರರನ್ನು ಯಾವ ಕಾರಣಕ್ಕೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಅವರ ಪರವಾಗಿ ಶಾಸಕನಾಗಿದ್ದಾಗಲೂ ಹೋರಾಟ ಮಾಡಿದ್ದೇನೆ. ಈಗಲೂ ಮಾಡುವೆ. ಹಂತ ಹಂತವಾಗಿ ಸೊರಬದಿಂದಲೇ ಈ ಹೋರಾಟ ಆರಂಭಿಸಲಾಗುವುದು. ಇದು ರಾಜ್ಯದಾದ್ಯಂತ ವಿಸ್ತರಿಸಲಾಗುವುದು.
- ಸೊರಬದಲ್ಲಿ 7,200 ಅರ್ಜಿಗಳಿವೆ. ಹಲವು ಸಾವಿರ ಅರ್ಜಿಗಳು ತಿರಸ್ಕರಿಸಲ್ಪಟ್ಟಿವೆ. ಈಗಿನ ಬಿಜೆಪಿ ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಂಡು ಕಾಯ್ದೆಗೆ ತಿದ್ದುಪಡಿ ತಂದು ಸಾಗುವಳಿದಾರರ ಹಿತ ಕಾಪಾಡಬಹುದಿತ್ತು. ಅದನ್ನು ಮಾಡಿಲ್ಲ.
ಈ ವೇಳೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಶಾಸಕ ಆರ್. ಪ್ರಸನ್ನಕುಮಾರ್, ಪ್ರಮುಖರಾದ ಹುಲ್ತಿಕೊಪ್ಪ ಶ್ರೀಧರ್, ಬಂಡಿ ರಾಮಚಂದ್ರ, ಪಿ.ಒ.ಶಿವಕುಮಾರ್, ಶ್ವೇತಾ ಬಂಡಿ ಹಲವರು ಉಪಸ್ಥಿತರಿದ್ದರು.
https://www.suddikanaja.com/2021/08/05/grand-welcome-to-madhu-bangarappa-by-shivamogga-congress/