ಸುದ್ದಿ ಕಣಜ.ಕಾಂ | KARNATAKA | BUDGET
ಶಿವಮೊಗ್ಗ: ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರದ ಮಾದರಿಯ ವೇತನ ಈ ಬಾರಿಯ ಬಜೆಟ್ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ನಗರದ ಸರ್ಕಾರಿ ನೌಕರರ ಭವನದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸಿಬ್ಬಂದಿಗೆ ಏರ್ಪಡಿಸಿದ್ದ ತಾಂತ್ರಿಕ ವಿಚಾರ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕೇಂದ್ರದ ಮಾದರಿಯ ವೇತನ ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ್ದು, ಇದು ಬಜೆಟ್ ನಲ್ಲಿ ಘೋಷಣೆ ಯಾಗುವ ಸಾಧ್ಯತೆ ಇದೆ ಎಂದರು.
READ | ಆಗುಂಬೆ ಘಾಟಿಯಲ್ಲಿ 10 ದಿನ ಸಂಚಾರ ನಿಷೇಧ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ
ಸಿ.ಎಸ್. ಷಡಕ್ಷರಿ ಹೇಳಿದ್ದೇನು?
- ರಾಜ್ಯದ ವಿವಿಧ ಇಲಾಖೆಗಳಲ್ಲಿ ಎರಡು ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದೆ. ಇದರ ಒತ್ತಡ ಈಗಿರುವ ನೌಕರರ ಮೇಲೆ ಬೀಳುತ್ತಿದೆ. ಅಭಿವೃದ್ಧಿಯಲ್ಲಿ ರಾಷ್ಟ್ರದಲ್ಲಿಯೇ ಕರ್ನಾಟಕ ಆರನೇ ಸ್ಥಾನದಲ್ಲಿದೆ. ಇದು ನೌಕರರ ಕಾರ್ಯವೈಖರಿಯನ್ನು ಎತ್ತಿ ತೋರಿಸುತ್ತದೆ. ವೇತನ ಹೆಚ್ಚಳವಾಗುವುದರಿಂದ ಸರ್ಕಾರದ ಖಜಾನೆ ಮೇಲೆ ಹೆಚ್ಚಿನ ಹೊರೆ ಬೀಳುವುದಿಲ್ಲ.
- ಪಶುಪಾಲನಾ ಇಲಾಖೆಯಲ್ಲಿ ಇರುವಂತಹ ಸಮಸ್ಯೆಗಳ ಕುರಿತು ಶೀಘ್ರದಲ್ಲೇ ಸಭೆ ನಡೆಸಿ ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಾಗುವುದು. ಇಲಾಖೆ ಸಿಬ್ಬಂದಿ ಕುಂದು-ಕೊರತೆಗಳನ್ನು ಕೂಡ ಪರಿಹರಿಸಲಾಗುವುದು.
- ಸರ್ಕಾರಿ ನೌಕರರ ಹಲವು ಬೇಡಿಕೆಗಳ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗಿದೆ. ಹೊಸ ಪಿಂಚಣಿ ಪದ್ಧತಿಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಪದ್ಧತಿಯನ್ನು ಜಾರಿಗೊಳಿಸಬೇಕು. ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮಕೊಳ್ಳಬೇಕು ಎಂಬ ಒತ್ತಾಯವನ್ನು ಕೂಡಾ ಸರ್ಕಾರಕ್ಕೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಪಶು ಪಾಲನಾ ಇಲಾಖೆಯ ಉಪ ನಿರ್ದೇಶಕ ಶಿವರುದ್ರಪ್ಪ ಎಲಿ, ಪಶು ವೈದ್ಯಾಧಿಕಾರಿಗಳಾದ ಡಾ. ಕೆ.ಎಂ. ಪ್ರಸನ್ನ, ಡಾ. ಕೆ.ಎಂ. ನಾಗರಾಜ್, ಡಾ. ಅರವಿಂದ್, ಡಾ. ಮಹದೇವ್ ಶರ್ಮಾ ಉಪಸ್ಥಿತರಿದ್ದರು.
https://www.suddikanaja.com/2021/02/24/demands-submitted-to-cm-bs-yadiyurappa-from-cs-shadakshari/