ಸುದ್ದಿ ಕಣಜ.ಕಾಂ | DISTRICT | MALENADU VASTRA UTSAVA
ಶಿವಮೊಗ್ಗ: ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಿರುವ ಮಲೆನಾಡು ವಸ್ತ್ರ ಉತ್ಸವಕ್ಕೆ ಜಿಪಂ ಸಿಇಓ ಎಂ.ಎಲ್.ವೈಶಾಲಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಚಾಲನೆ ನೀಡಲಾಗಿದೆ.
ಜಿಲ್ಲಾ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಇದಾಗಿದ್ದು, ಮಾರ್ಚ್ 4 ರಿಂದ 9ರ ವರೆಗೆ ಆಯೋಜಿಸಲಾಗಿದೆ.
ಕೇಂದ್ರ ಪುರಸ್ಕೃತ ನ್ಯಾಷನಲ್ ಹ್ಯಾಂಡ್ ಲೂಮ್ ಡೆವೆಲಪ್ಮೆಂಟ್ ಪ್ರೋಗ್ರಾಂ ಯೋಜನೆಯಡಿ ಶಿವರಾತ್ರಿ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಜಿಲ್ಲಾ ಕೈಮಗ್ಗ ಮೇಳವನ್ನು ಜವಳಿ ಮಂತ್ರಾಲಯ, ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ, ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಮೇಳ ಆಯೋಜಿಸಲಾಗಿದೆ.
READ | ಹೊಳೆಹೊನ್ನೂರು ಪೊಲೀಸರ ಭರ್ಜರಿ ದಾಳಿ, ಕಾರ್ ಕ್ಯಾಬಿನ್ ನಲ್ಲಿದ್ದ 18 ಲಕ್ಷ ರೂ. ಕದ್ದಿದ್ದ ಆರೋಪಿಗಳು ಅರೆಸ್ಟ್
ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಸಪಾರೆ ಶ್ರೀನಿವಾಸ್ ಮಾತನಾಡಿ, ಮೇಳದಲ್ಲಿ ರಾಜ್ಯ ಸರ್ಕಾರದಿಂದ ಶೇ.20 ರಷ್ಟು ರಿಯಾಯಿತಿ ದರದಲ್ಲಿ ಕೈಮಗ್ಗ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ. 28 ಮಳಿಗೆಗಳನ್ನು ಸ್ಥಾಪಿಸಲಾಗಿ, ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯದ ಕೈಮಗ್ಗ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.
ಮೇಳದಲ್ಲಿ ಏನೇನು ಲಭ್ಯ?
ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಹಾವೇರಿ, ಗದಗ, ಚಿಕ್ಕಬಳ್ಳಾಪುರ ಹಾಗೂ ಹೊರ ರಾಜ್ಯಗಳಾದ ಪಶ್ಚಿಮ ಬಂಗಾಳ, ಗುಜರಾತ್ ರಾಜ್ಯಗಳ ಕೈಮಗ್ಗ ನೇಕಾರರಿಂದ ತಯಾರಿಸಲ್ಪಟ್ಟ ಹತ್ತಿ ಮತ್ತು ರೇಷ್ಮೆ ಬಟ್ಟೆಗಳು, ಪಾರಂಪರಾಗತ ಮೊಳಕಾಲ್ಮೂರು ಅಪ್ಪಟ ರೇಷ್ಮೆ ಸೀರೆಗಳು, ಇಳಕಲ್ ಸೀರೆಗಳು, ಉಣ್ಣೆ ಕಂಬಳಿಗಳು, ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ತಯಾರಾಗುತ್ತಿರುವ ಹತ್ತಿ ಕೈಮಗ್ಗ ಉತ್ಪನ್ನಗಳಾದ ಕಾಟನ್ ಸೀರೆಗಳು, ಲುಂಗಿಗಳು, ಬೆಡ್ಶೀಟ್, ಶರ್ಟಿಂಗ್ಗಳು, ಕೈವಸ್ತ್ರ, ಟವಲ್ಸ್ ಇತ್ಯಾದಿ.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಗಣೇಶ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಜವಳಿ ಪ್ರವರ್ಧನಾದಿಕಾರಿ ಅಪ್ಪಾ ರೇಖಾ ಸಿದ್ರಾಮಪ್ಪ ಉಪಸ್ಥಿತರಿದ್ದರು.
https://www.suddikanaja.com/2021/09/04/pavitra-vastra-abhiyan-at-shivamogga/