ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕವು ಭಾನುವಾರ ಆಯೋಜಿಸಿದ್ದ ‘ಕೆಳದಿ ಶಿವಪ್ಪ ನಾಯಕ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು `ಯಡಿಯೂರಪ್ಪ’ ಅವರ ಹೆಸರಿಡಬಹುದು ಎಂದು ಸಲಹೆ ನೀಡಿದ್ದಾರೆ.
READ | ಹರ್ಷನ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ ಟಾಪ್ 3 ಪಾಯಿಂಟ್ಸ್
ಮಾಜಿ ಸಿಎಂ ಯಡಿಯೂರಪ್ಪ ಅವರ ಸಮ್ಮುಖದಲ್ಲಿಯೇ ಮಾತನಾಡಲಾರಂಭಿಸಿದ ಈಶ್ವರಪ್ಪ, `ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭಕ್ಕೆ ಬಿ.ಎಸ್.ವೈ ಪಾತ್ರ ಪ್ರಮುಖವಾಗಿದೆ. ಅದಕ್ಕಾಗಿ, ಅವರ ಹೆಸರಿಡುವುದು ಸಮಂಜಸ ಎನಿಸುತ್ತದೆ’ ಎಂದು ಹೇಳಿದರು.