ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಬೆನ್ನಲ್ಲೇ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದ್ದು, ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
READ | ಚಿನ್ನದ ಬೆಲೆ ದಿಢೀರ್ ಏರಿಕೆಗೆ ಟಾಪ್ 2 ಕಾರಣ, ಬಡವರ ಜೀವ ಹಿಂಡುತ್ತಿರುವ ಬಂಗಾರ
ಜೀವ ಬೆದರಿಕೆಗೆ ಕಾರಣವೇನು?
ಫೆಬ್ರವರಿ 20ರ ರಾತ್ರಿ ಹರ್ಷನ ಬರ್ಬರ ಕೊಲೆ ನಡೆದಿದ್ದು, ಪ್ರಕರಣ ಸಂಬಂಧ ಡಿ.ಎಸ್.ಅರುಣ್ ಅವರು ಈ ಸಂಬಂಧ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. 21ರಂದು ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಮುಸ್ತಾಕ್ ಅಲಿ ಎಂಬ ಹೆಸರಿನಲ್ಲಿ ವ್ಯಕ್ತಿಯೊಬ್ಬನು ‘ನಿಮ್ಮ ತಲೆಲಿ ಇವತ್ತು ಕೇವಲ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ ಅಷ್ಟೆ. ಆದರೆ, ಮುಂದಿನ ದಿನ ನಿಮ್ಮ ಪತ್ನಿ, ಮಕ್ಕಳೇ ಟಾರ್ಗೆಟ್ ನೆನಪಿಸಿ, ಷಂಡ ಸರ್ಕಾರದ ಭಂಡರಂತೆ ವರ್ತಿಸುವ ಪ್ರಚಂಡರೆ’ ಎಂದು ಬೆದರಿಕೆ ಹಾಕಲಾಗಿದೆ.
ಭದ್ರತೆಗೆ ಕೋರಿಕೆ
ಡಿ.ಎಸ್.ಅರುಣ್ ಅವರ ಆಪ್ತ ಸಹಾಯಕ ದೂರು ನೀಡಿದ್ದು, ಜೀವ ಬೆದರಿಕೆ ಇರುವುದರಿಂದ ಭದ್ರತೆ ಒದಗಿಸಬೇಕು ಎಂದು ಕೋರಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
https://www.suddikanaja.com/2021/10/28/attack-on-businessman-house-and-demand-for-money-at-shivamogga/