ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಮಲೆನಾಡಿನ ಶೈಕ್ಷಣಿಕ ಹೆಮ್ಮರವಾಗಿರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆ (NES)ಯ 75ನೇ ವರ್ಷದ ಅಮೃತ ಮಹೋತ್ಸವ ಪ್ರಯುಕ್ತ ವರ್ಷವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಎನ್ಇಎಸ್ ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಪಿ.ನಾರಾಯಣ್ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ವಿದ್ಯಾ ಕ್ಷೇತ್ರಕ್ಕೆ ಖಾಸಗಿ ಭಾಗವಹಿಸುವಿಕೆಯ ಉದ್ದೇಶದಿಂದ ರಾಷ್ಟ್ರೀಯ ಶಿಕ್ಷಣ ಸಮಿತಿಯು ಸ್ಥಾಪನೆಗೊಂಡಿದೆ. ಎಂದರು.
ಮಾರ್ಚ್ 12ರಂದು ಮಧ್ಯಾಹ್ನ 3 ಗಂಟೆಗೆ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಮೃತ ಮಹೋತ್ಸವದ ಉಪನ್ಯಾಸ ಸರಣಿಯ ಪ್ರಥಮ ಉಪನ್ಯಾಸ ಆಯೋಜಿಸಲಾಗಿದೆ. ಈ ವೇಳೆ, ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಶಿವನ್ ಅವರು ‘ದೈನಂದಿನ ಜೀವನದಲ್ಲಿ ಬಾಹ್ಯಾಕಾಶ ತಂತ್ರಜ್ಞಾನದ ಪ್ರಭಾವ’ ಕುರಿತಾಗಿ ಮಾತನಾಡಲಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
– ಡಾ.ಪಿ.ನಾರಾಯಣ್, ಎನ್ಇಎಸ್ ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷರು
ಜಿಲ್ಲೆಯ ಹೋರಾಟಗಾರರು ಮಹಾತ್ಮ ಗಾಂಧೀಜಿ (Mahatma Gandhiji) ಅವರ ಕರೆಗೆ ಮನ್ನಣೆ ನೀಡಿ ‘ನಹೀ ಜ್ಞಾನೇನ ಸದೃಶ್ಯಂ’ ಘೋಷ ವಾಕ್ಯದಡಿ 1946ರಲ್ಲಿ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯು ಮೊದಲ ಹಂತವಾಗಿ ರಾಷ್ಟ್ರೀಯ ಪ್ರೌಢ ಶಾಲೆ(high school) ಯನ್ನು ಪ್ರಾರಂಭಿಸಿತ್ತು ಎಂದು ಇತ್ಯಾದಿ ಇತಿಹಾಸವನ್ನು ಮೆಲುಕು ಹಾಕಿದರು.
READ | ಮಹಿಳೆಯರಿಗೆ ಭಿನ್ನವಾಗಿ ಗೌರವ ಸೂಚಿಸಿದ ಗೂಗಲ್, ವೈರಲ್ ಆಯ್ತು ಎನಿಮೇಷನ್, ಏನಿದರ ವಿಶೇಷ?
14,000ಕ್ಕೂ ಅಧಿಕ ವಿದ್ಯಾರ್ಥಿಗಳು
ಪ್ರೌಢ ಶಾಲೆಯೊಂದಿಗೆ ಶುರುವಾದ ಸಂಸ್ಥೆ ಈಗ ಹೆಮ್ಮರವಾಗಿ ಬೆಳೆದಿದೆ. ಪ್ರಸ್ತುತ ಕಲೆ, ವಾಣಿಜ್ಯ, ವಿಜ್ಞಾನ, ಎಂಜಿನಿಯರಿಂಗ್, ಫಾರ್ಮಸಿ, ಕಾನೂನು, ಸಿಬಿಎಸ್ಸಿ, ಐಸಿಎಸ್ಸಿ, ಎಂ.ಬಿ.ಎ, ಎಂ.ಸಿ.ಎ ಸೇರಿದಂತೆ ಪ್ರಾಥಮಿಕ, ಪ್ರೌಢ, ಪಿ.ಯು.ಸಿ, ಪದವಿ, ಸ್ನಾತ್ತಕೊತ್ತರ ಪದವಿ ಶಿಕ್ಷಣದ 36 ವಿದ್ಯಾಲಯಗಳನ್ನು ಮುನ್ನಡೆಸಲಾಗುತ್ತಿದೆ. 1,500ಕ್ಕೂ ಹೆಚ್ಚು ಸಿಬ್ಬಂದಿ, 14,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ ಎಂದರು.
ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ
ಮಾರ್ಚ್ 10 ರಂದು ಸಂಜೆ 4 ಗಂಟೆಗೆ ಎನ್.ಇ.ಎಸ್ ಕಾರ್ಯಾಲಯದ ಆವರಣದಲ್ಲಿ ವಿಶೇಷ ಅಂಚೆ ಲಕೋಟೆ(Postal envelope) ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಕ್ಷಿಣ ವಲಯ ಪೋಸ್ಟ್ ಮಾಸ್ಟರ್ ಜನರಲ್ ಡಿ.ಎಸ್.ವಿ.ಆರ್. ಮೂರ್ತಿ ಅಂಚೆ ಲಕೋಟೆ ಬಿಡುಗಡೆ ಮಾಡಲಿದ್ದಾರೆ. ಮೇಯರ್ ಸುನೀತಾ ಅಣ್ಣಪ್ಪ, ಶಿವಮೊಗ್ಗ ವಿಭಾಗ ಅಂಚೆ ಅಧಿಕ್ಷಕ ಜಿ.ಹರೀಶ್, ಉನ್ನತ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಅಶೋಕ.ಡಿ.ರೇವಣಕರ್, ಡಿಡಿಪಿಐ ಎನ್.ಎಂ.ರಮೇಶ್ ಪಾಲ್ಗೊಳ್ಳಲಿದ್ದಾರೆ ಎಂದರು.
2022-23 ಎನ್.ಇಎಸ್ ಅಮೃತ ವರ್ಷ
2022-23 ವರ್ಷವನ್ನು ಎನ್.ಇ.ಎಸ್ ಅಮೃತ ವರ್ಷವೆಂದು ಘೋಷಿಸಲಾಗಿದೆ. ಪ್ರತಿ ತಿಂಗಳು ಉಪನ್ಯಾಸ ಸರಣಿ ಸೇರಿದಂತೆ ವಿವಿಧ ವೈಜ್ಞಾನಿಕ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯ ಚಟುವಟಿಕೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಅಮೃತ ಮಹೋತ್ಸವದ ಸವಿನೆನಪಿಗಾಗಿ ಒಂದು ಶಾಶ್ವತ ಯೋಜನೆಯನ್ನು ಸಹ ಅನುಷ್ಠಾನಗೊಳಿಸಲಾಗುವುದು ಎಂದರು.
ಎನ್.ಇ.ಎಸ್ ಅಧ್ಯಕ್ಷ ಎ.ಎಸ್.ವಿಶ್ವನಾಥ್, ಉಪಾಧ್ಯಕ್ಷ ಟಿ.ಆರ್.ಅಶ್ವಥನಾರಾಯಣ್ ಶೆಟ್ಟಿ, ಖಜಾಂಚಿ ಸಿ.ಆರ್.ನಾಗರಾಜ್, ಕುಲಸಚಿವ ಪ್ರೊ.ಟಿ.ಎಸ್.ಹೂವಯ್ಯಗೌಡ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.