ಸುದ್ದಿ ಕಣಜ.ಕಾಂ | NATIONAL | POLITICAL NEWS
ಶಿವಮೊಗ್ಗ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಕನಸಾಗಿಯೇ ಉಳಿಯಲಿದೆ ಅನ್ನುವುದನ್ನ ಪಂಚ ರಾಜ್ಯ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಿಗೆ ಸಂಸದ ರಾಘವೇಂದ್ರ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು,ಬಿಜೆಪಿಯ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ನಾಯಕರು, ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
READ | ಸಹ್ಯಾದ್ರಿ ಕಾಲೇಜು ವಾಟ್ಸಾಪ್ ಗ್ರೂಪಿನಲ್ಲಿ ಪಾಕ್ ಧ್ವಜದ ಸ್ಟೀಕರ್ ಪೋಸ್ಟ್ ವಿವಾದ, ತನಿಖೆಗೆ ಸಮಿತಿ ರಚನೆ
ಬಿಜೆಪಿ ಪಕ್ಷ ದೇಶದ ಮೂಲೆ ಮೂಲೆಯಲ್ಲೂ ಛಾಪು ಮೂಡಿಸಿದೆ. ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವು ಪಕ್ಷಗಳು ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಬಲಿಷ್ಠಗೊಳಿಸಿದೆ. ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಉದಾಹರಣೆ ಪಂಚರಾಜ್ಯ ಚುನಾವಣೆ ಫಲಿತಾಂಶ. ಉತ್ತರ ಪ್ರದೇಶ, ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಲಭಿಸಿದೆ. ಉತ್ತರಖಂಡ, ಗೋವಾದಲ್ಲಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿದೆ ಎಂದಿದ್ದಾರೆ.
ಸರ್ಕಾರ ರಚನೆ ಮಾಡಲು ಗೋವಾಕ್ಕೆ ಡಿ.ಕೆ.ಶಿವಕುಮಾರ್ ಮತ್ತು ಉತ್ತರಖಂಡಕ್ಕೆ ಎಂ.ಬಿ.ಪಾಟೀಲ್ ಅವರು ತೆರಳಿದ್ದರು. ಆದರೆ ಇಬ್ಬರೂ ಬರಿಗೈಲಿ ಹಿಂತಿರುಗಿ ಬರುವಂತಾಗಿದೆ. ಕಾಂಗ್ರೆಸ್ ಪಕ್ಷದವರು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಹಗಲು ಕನಸು ಕಾಣುತ್ತಿದ್ದಾರೆ. ಅದು ಕನಸಾಗಿಯೇ ಉಳಿಯಲಿದೆ ಎಂದು ತಿಳಿಸಿದ್ದಾರೆ.
https://www.suddikanaja.com/2021/06/06/the-method-of-worship-in-the-12th-century-inscription-with-its-illustration/