ಸುದ್ದಿ ಕಣಜ.ಕಾಂ | DISTRICT | SPECIAL REPORT
ಶಿವಮೊಗ್ಗ: ಕೊರೊನಾ ಲಾಕ್ ಡೌನ್ ವೇಳೆ ಬೆಂಗಳೂರಿನಲ್ಲಿದ್ದ ಕೆಲಸ ಕಳೆದುಕೊಂಡು ಊರಿಗೆ ವಾಪಸ್ ಆದ ಪ್ರದೀಪ್ ಕುರಿಗಳನ್ನು ಕೊಂಡು ಕುರಿ ಸಾಕಾಣಿಕೆಯನ್ನೇ ತಮ್ಮ ಉದ್ಯೋಗವಾಗಿಸಿಕೊಂಡಿದ್ದಾರೆ. ನಂತರ ಮಹಾತ್ಮಾಗಾಂಧಿ ನರೇಗಾ ಯೋಜನೆ ಅಡಿ ಕುರಿ ಶೆಡ್ ನಿರ್ಮಿಸಿಕೊಂಡು ಉತ್ತಮ ಆದಾಯ ಗಳಿಸುತ್ತಾ ಸ್ವಗ್ರಾಮದಲ್ಲೇ ನೆಲೆ ಕಂಡುಕೊಂಡಿದ್ದಾರೆ.
READ | Today Gold, Silver Rate, ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ, ಬಂಗಾರ, ಬೆಳ್ಳಿ ಮತ್ತೆ ಅಗ್ಗ
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಭಾರಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಣ್ಣಿಗೆರೆಯ ಪ್ರದೀಪ್ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೋವಿಡ್ ವೇಳೆ ಕೆಲಸವಿಲ್ಲದೇ ಊರಿಗೆ ಬಂದಾಗ ಅವರು ಆರಂಭಿಸಿದ ಉದ್ಯಮ ‘ಕುರಿ ಸಾಕಾಣಿಕೆ’.
ಮಹಾತ್ಮಾಗಾಂಧಿ ನರೇಗಾ ಯೋಜನೆಯ ಮಾರ್ಗಸೂಚಿಗಳನ್ವಯ ಕಾಮಗಾರಿಯನ್ನು ಗ್ರಾಮಸಭೆಯಲ್ಲಿ ಅನುಮೋದನೆ ಪಡೆದು ಕ್ರಿಯಾ ಯೋಜನೆ ಸಿದ್ದಪಡಿಸಿ, ಜಿಲ್ಲಾ ಕಾರ್ಯಕ್ರಮ ಸಮನ್ವಯಾಧಿಕಾರಿಗಳಿಂದ ಅನುಮೋದನೆ ಪಡೆದು ಯೋಜನೆ ಅನುಷ್ಠಾನ ಮಾಡಲಾಗಿದೆ. 10 ಮಾನವ ದಿನಗಳಲ್ಲಿ ಅಂದಾಜು ವೆಚ್ಚ ರೂ. 68 ಸಾವಿರದಲ್ಲಿ ಈ ಶೆಡ್ ಅನ್ನು ನಿರ್ಮಿಸಲಾಗಿದೆ. ಈ ಸೌಲಭ್ಯದಿಂದಾಗಿ ಸುಸಜ್ಜಿತ ಕುರಿ ಶೆಡ್ ನಿರ್ಮಾಣದೊಂದಿಗೆ ಕುರಿ ಸಾಕಾಣಿಕೆಯಲ್ಲಿ ಹೆಚ್ಚಳ ಮತ್ತು ಆದಾಯದಲ್ಲಿ ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ.
– ಎಂ.ಎಲ್.ವೈಶಾಲಿ, ಜಿ.ಪಂ, ಸಿಇಓತಾನು ಬೆಂಗಳೂರಿನಲ್ಲಿ ಕೆಲಸ ಕಳೆದುಕೊಂಡ ನಂತರ ಉಳಿತಾಯದ ಅಲ್ಪ ಸ್ವಲ್ಪ ಹಣದಲ್ಲಿ ಮೊದಲಿಗೆ 10 ಕುರಿಗಳನ್ನು ಖರೀದಿಸಿ, ಸಾಕಾಣಿಕೆ ಆರಂಭಿಸಿದೆ. ನಂತರ ನರೇಗಾ ಯೋಜನೆ ನೆರವಿನೊಂದಿಗೆ ಒಂದು ಸುಸಜ್ಜಿತ ಕುರಿ ಶೆಡ್ ನಿರ್ಮಿಸಿಕೊಂಡು ನಂತರ ಆ 10 ಕುರಿಗಳನ್ನು ಏಳರಿಂದ ಎಂಟು ತಿಂಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಹಣಕ್ಕೆ ಮಾರಾಟ ಮಾಡಿ, ಮತ್ತೆ 40 ಕುರಿಗಳನ್ನು ಖರೀದಿಸಿ ಸಾಕಾಣಿಕೆ ಮಾಡುತ್ತಿದ್ದೇನೆ. ಗೊಬ್ಬರದಿಂದಲೂ ಉತ್ತಮ ಆದಾಯ ಇದ್ದು, ಈ ಉದ್ಯೋಗ ನನಗೆ ನೆಮ್ಮದಿ ನೀಡಿದೆ.
– ಪ್ರದೀಪ್, ರೈತ, ಬೆಣ್ಣಿಗೆರೆ
10 ಕುರಿಗಳಿಂದ ಆರಂಭವಾದ ಉದ್ಯಮ
ತಮ್ಮ ಉಳಿತಾಯದ ಹಣದಲ್ಲಿ ಮೊದಲಿಗೆ 10 ಕುರಿಗಳನ್ನು ಸಾಕಿದ ಅವರು ಏಳರಿಂದ ಎಂಟು ತಿಂಗಳಲ್ಲಿ ಈ ಕುರಿಗಳನ್ನು ಮಾರಿ ಉತ್ತಮ ಆದಾಯ ಗಳಿಸಿ, ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಕುರಿಗಳನ್ನು ಖರೀದಿಸಿದ್ದಾರೆ. ಪ್ರಸ್ತುತ 40 ಕುರಿಗಳನ್ನು ಹೊಂದಿದ್ದು, ಕುರಿ ಗೊಬ್ಬರದಿಂದ ಸಹ ಉತ್ತಮ ಆದಾಯ ಬರುತ್ತಿದೆ.
READ | ಹೊಳಲೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ, ಏನೇನು ಪರಿಶೀಲನೆ
ಉದ್ಯಮಕ್ಕೆ ಕಸುವು ನೀಡಿ ನರೇಗಾ
ಪ್ರದೀಪ್ ಅವರು ತಮ್ಮ ರೂಪಿಸಿಕೊಳ್ಳುವುದಕ್ಕೆ ಅನುಕೂಲ ಮಾಡಿಕೊಟ್ಟಿದ್ದು ಮಹಾತ್ಮಾಗಾಂಧಿ ನರೇಗಾ ಯೋಜನೆ. ಇದದರಡಿ ಕುರಿ ಶೆಡ್ ನಿರ್ಮಿಸಿಕೊಂಡು ಸುಸಜ್ಜಿತ ಕುರಿ ಶೆಡ್ ನಿಂದಾಗಿ ಕುರಿ ಸಾಕಾಣಿಕೆ ಉದ್ಯಮ ವ್ಯವಸ್ಥಿತವಾಗಿ ನಡೆದಿದೆ. ಸಾಕಾಣಿಕೆ ಕೂಡ ಸುಲಭವಾಗಿದೆ. ಇವರ ಕುರಿ ಶೆಡ್ ಇತರರಿಗೆ ಮಾದರಿಯಾಗಿದ್ದು ಸುತ್ತಮುತ್ತಲಿನ ರೈತರು ಕುರಿ ಶೆಡ್ ಗೆ ಭೇಟಿ ನೀಡಿ ಕುರಿ ಸಾಕಾಣಿಕೆ ಬಗ್ಗೆ ಪ್ರದೀಪ್ ರಿಂದ ಮಾಹಿತಿ ಪಡೆಯುತ್ತಿದ್ದಾರೆ.
ಬೆಂಗಳೂರಿನಿಂದ ವಾಪಸ್ ಆದ ಪ್ರದೀಪ್, ನರೇಗಾ ಯೋಜನೆಯ ಸೌಲಭ್ಯಗಳ ಕುರಿತು ಗ್ರಾಮದಲ್ಲಿ ಅಂಟಿಸಲಾದ ಪ್ರಚಾರದ ಪೆÇಸ್ಟ್ ಗಳನ್ನು ಓದಿಕೊಂಡು, ಗ್ರಾ.ಪಂ ಗೆ ಭೇಟಿ ನೀಡಿ, ಪಿಡಿಓ ಅವರಿಂದ ಕುರಿ ಶೆಡ್ ಕುರಿತು ಹೆಚ್ಚಿನ ಮಾಹಿತಿ ಪಡೆದು ಯೋಜನೆಯ ಸದುಪಯೋಪ ಪಡೆದಿದ್ದಾರೆ.
https://www.suddikanaja.com/2022/02/28/mahatma-gandhi-national-rural-employment-guarantee-scheme-narega-has-given-life-to-the-farmers-in-the-district/