ಸುದ್ದಿ ಕಣಜ.ಕಾಂ | TALUK | POLITICAL NEWS
ಸೊರಬ: ಕಳೆದ ಸರ್ಕಾರದ ಅವಧಿಯಲ್ಲಿ ಘೋಷಿಸಿದ ಪವರ್ ಗ್ರೀಡ್ ಗಳೇ ಇನ್ನೂ ಪೂರ್ಣಗೊಂಡಿಲ್ಲ. ಅದರಲ್ಲೂ ಎಲ್ಲಾದರೂ ಕಮಿಷನ್ ಸಿಗಬಹುದಾ ಎಂಬ ಯೋಚನೆ ಮಾಡುತ್ತಿರಬಹುದು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಗಂಭೀರವಾಗಿ ಆರೋಪಿಸಿದ್ದಾರೆ.
ಆನವಟ್ಟಿಯಲ್ಲಿ ರೈತರ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಟ್ರಾನ್ಸ್ಫಾರ್ಮರ್ ಸುಟ್ಟು ಹೋದರೂ, ವಾರಗಟ್ಟಲೇ ಸರಿಯಾಗಲ್ಲ. ದಿನದಲ್ಲಿ ನಾಲ್ಕು ಗಂಟೆ ವಿದ್ಯುತ್ ನೀಡಿದರೂ ಅದೇ ಹೆಚ್ಚು. ಹೀಗಾದರೆ ರೈತರ ಗತಿ ಏನು. ಸರ್ಕಾರ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿದ್ದಾರೆ.
READ | ಆಹಾರ ಸೇವಿಸಿ ವಿದ್ಯಾರ್ಥಿನಿಯರ ಅಸ್ವಸ್ಥರಾದ ಬೆನ್ನಲ್ಲೇ ಸಹ್ಯಾದ್ರಿ ಕಾಲೇಜಿನಲ್ಲಿ ಬೃಹತ್ ಪ್ರತಿಭಟನೆ
ಸೊರಬ ತಾಲೂಕಿನ ಹಲವು ಭಾಗಗಳಲ್ಲಿ ಈಗಲೂ ವಿದ್ಯುತ್ ತೊಂದರೆ ಇದೆ. ಜಿಲ್ಲೆಯಲ್ಲೇ ವಿದ್ಯುತ್ ಉತ್ಪಾದನೆಯಾದರೂ ಸ್ಥಳೀಯರಿಗೆ ಪ್ರಯೋಜನವಾಗುತ್ತಿಲ್ಲ ಎಂದು ಹೇಳಿದರು.
ಹಾಲನಗಲ್ ಶಾಸಕ ಶ್ರೀನಿವಾಸ ಮಾನೆ, ಕಾಂಗ್ರೆಸ್ ಮುಖಂಡರಾದ ಜಿ.ಡಿ.ಮಂಜುನಾಥ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.