ಸುದ್ದಿ ಕಣಜ.ಕಾಂ | DISTRICT | HIJAB VERDICT
ಶಿವಮೊಗ್ಗ: ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಅದರ ಬಗ್ಗೆ ಜನಪ್ರತಿನಿಧಿಗಳು ಪ್ರತಿಕ್ರಿಯೆ ನೀಡಿದ್ದಾರೆ.
READ | ಜನ್ಮದಿನ ಹಿನ್ನೆಲೆ ಎಲ್ಲೆಡೆ ಪುನೀತ್ ರಾಜಕುಮಾರ್ ಫ್ಲೆಕ್ಸ್, ‘ಸಿನಿ ಜರ್ನಿ’ ನೆನಪು
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು?
ಹೈ ಕೊರ್ಟ್ ನೀಡಿರುವ ತೀರ್ಪನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ಪ್ರಚೋದನೆಗಳನ್ನು ಕೊಟ್ಟಿದ್ದರೋ ಅವರುಗಳು ಇದನ್ನು ಗಮನಿಸಿ ಮಕ್ಕಳು ಶಾಲೆಗಳಿಗೆ ಮತ್ತೆ ಬರುವಂತೆ ಬುದ್ಧಿವಾದ ಹೇಳಬೇಕು. ಮಕ್ಕಳ ಶಿಕ್ಷಣ ಹಾಳಾಗಬಾರದು.ಪ್ರತಿಯೊಬ್ಬರು ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿರಬೇಕು. ಇದು ಎಲ್ಲರ ಜವಾಬ್ದಾರಿಯಾಗಿದೆ.
ಸರ್ಕಾರದ ತೀರ್ಮಾನವನ್ನು ನ್ಯಾಯಾಲಯ ಎತ್ತಿಹಿಡಿದಿದ್ದಕ್ಕೆ ಸಂತೋಷವಾಗಿದೆ. ಅನ್ಯಾಯವಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಿದೆ. ಮಧ್ಯಂತರ ತೀರ್ಪನ್ನೇ ಫಾಲೋ ಮಾಡಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ. ಯಾವುದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗದ ರೀತಿಯಲ್ಲಿ ಸರ್ಕಾರ ಗಮನ ಹರಿಸಲಿದೆ. - ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?
ಹೈಕೋರ್ಟ್ ಸ್ಪಷ್ಟ ತೀರ್ಪನ್ನು ನೀಡಿದೆ. ಹೀಗಾಗಿ, ಇದರ ಬಗ್ಗೆ ಯಾರೂ ಪರ, ವಿರೋಧಗಳನ್ನು ಚರ್ಚಿಸದೇ ಅದಕ್ಕೆ ತಲೆ ಬಾಗಬೇಕು. ಕಳೆದ ಎರಡು ತಿಂಗಳುಗಳಿಂದ ತೊಂದರೆಯಾಗಿದ್ದು, ಶಿಕ್ಷಣಕ್ಕೆ ಒತ್ತು ನೀಡಬೇಕು. - ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕೋರ್ಟ್ ಐಸಿಹಾಸಿಕ ತೀರ್ಪುನ್ನು ನೀಡಿದೆ. ಈ ಮೂಲಕ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕನ್ನು ಎತ್ತಿ ಹಿಡಿದಿದೆ. ತೀರ್ಪು ಸಂತೋಷ ಕೊಟ್ಟಿದೆ. ನ್ಯಾಯಾಲಯಕ್ಕೆ ಅಭಿನಂದನೆ. ಎಲ್ಲರೂ ಶಾಂತಿಯಿಂದ ಇರಬೇಕು.
https://www.suddikanaja.com/2022/02/18/counter-between-bjp-and-muslim-leaders-on-hijab-and-saffron-shawl-controversy-at-shivamogga/