ಸುದ್ದಿ ಕಣಜ.ಕಾಂ | TALUK | WILD LIFE
ಹೊಸನಗರ: ತಾಲೂಕಿನ ರಿಪ್ಪನಪೇಟೆ ಸಮೀಪದ ಮೂಗುಡ್ತಿ ಪ್ರದೇಶದಲ್ಲಿ ಕಾಡಾನೆ ಹಾವಳಿಗೆ ಬ್ರೇಕ್ ಹಾಕುವುದಕ್ಕೆ ಸಕ್ರೆಬೈಲಿನ ಮೂರು ಸಾಕಾನೆಗಳು ಕೂಂಬಿಂಗ್ ಆರಂಭಿಸಿವೆ.
READ | ಅಕ್ರಮವಾಗಿ ಹಸುಗಳನ್ನು ತಂದಿಟ್ಟುಕೊಂಡಿದ್ದ ಇಬ್ಬರು ಅರೆಸ್ಟ್
ಈ ಭಾಗದ ಜಮೀನುಗಳಿಗೆ ಆನೆಗಳು ನುಗ್ಗಿ ಬೆಳೆ, ತೋಟಗಳನ್ನು ಹಾಳು ಮಾಡುತ್ತಿದ್ದರಿಂದ ರೈತರು ಬೇಸತ್ತಿದ್ದರು. ಇದರಿಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮೂಗುಡ್ತಿ ವನ್ಯಜೀವಿ ವಲಯ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗಿದ್ದಾರೆ. ಆದರೆ, ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಹಿಮ್ಮೆಟ್ಟಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಹೀಗಾಗಿ, ಕಿಮ್ಮನೆ ಕೂಡ ಪ್ರತಿಭಟನೆ ಹಿಂಪಡೆದಿದ್ದಾರೆ.
3 ಆನೆ, 8 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿ
ಕಾಡಾನೆಗಳನ್ನು ವಾಪಸ್ ಕಾಡಿಗೆ ಅಟ್ಟುವುದಕ್ಕಾಗಿ ಸಕ್ರೆಬೈಲಿನ ಪರಿಣಿತ ಮೂರು ಆನೆಗಳನ್ನು ತರಿಸಲಾಗಿದೆ. ಅವುಗಳೊಂದಿಗೆ ಮಾವುತರು ಮತ್ತು ಸಿಬ್ಬಂದಿ ಸೇರಿ ಒಟ್ಟು 8 ಜನ ಕಾರ್ಯನಿರ್ವಹಿಸುತ್ತಿದ್ದಾರೆ.