ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ನಗರದ ಖಾಸಗಿ ಆಸ್ಪತ್ರೆಯೊಂದರಿಗೆ ನಾಪತ್ತೆಯಾಗಿದ್ದ ವ್ಯಕ್ತಿ ಸಾಗರ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.
ಸಾಗರ ರಸ್ತೆಯ ವೀರಗಾನ ಬೆನವಳ್ಳಿ ಸಮೀಪ ಅಪಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಸಾಗರ ತಾಲೂಕಿನ ಗೊರಗದ್ದೆಯ ಬಂಗಾರಪ್ಪ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಗರದ ಮಾನಸಿಕ ಆಸ್ಪತ್ರೆಯೊಂದರ ಒಳರೋಗಿಗಳ ವಿಭಾಗದಲ್ಲಿ ದಾಖಲಾಗಿದ್ದ ಇವರು ಶುಕ್ರವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. ಶನಿವಾರ ಬೆಳಗ್ಗೆ ರಸ್ತೆ ಬದಿ ನಡೆದುಕೊಂಡು ಹೋಗುವಾಗ ವಾಹನ ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.